ಕರ್ನಾಟಕ

ರಿಜ್ವಾನ್ ಆರ್ಷದ್, ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

Sumana Upadhyaya
ಬೆಂಗಳೂರು: ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಪ್ರಕಾಶ್ ರಾಜ್ ಮೇಲೆ ಕಳೆದ ವಾರ ದೂರು ದಾಖಲಿಸಿಕೊಂಡಿದ್ದ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ನಿನ್ನೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಆರ್ಷದ್ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೂಡ ಕೇಸು ದಾಖಲಿಸಿಕೊಂಡಿದೆ.
ಚುನಾವಣಾ ಆಯೋಗದ ಅನುಮತಿ ಪಡೆಯದೆ ರಿಜ್ವಾನ ಅವರು ದೊಡ್ಡೆನಕುಂಡಿಯಲ್ಲಿ ಪ್ರಚಾರ ನಡೆಸಿದ್ದಾರೆ ಎಂದು ಮತ್ತು ತೇಜಸ್ವಿ ಸೂರ್ಯ ಭಾರತದ ರಾಷ್ಟ್ರಧ್ವಜವನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಕೇಸು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನ ಕೆ ಆರ್ ಪುರಂನ ಫ್ಲೈಯಿಂಗ್ ಸ್ಕ್ವಾಡ್ ನ ಮುಖ್ಯಸ್ಥ ವೆಂಕಟೇಶ್ ಸಿ ಅವರು ರಿಜ್ವಾನ್ ಆರ್ಷದ್ ವಿರುದ್ಧ ದೂರು ನೀಡಿದ್ದಾರೆ. ರಿಜ್ವಾನ್ ಮತ್ತು ಅವರ ಬೆಂಬಲಿಗರು ಕಳೆದ 13ರಂದು ಸಾಯಂಕಾಲ 5 ಗಂಟೆ ಸುಮಾರಿಗೆ ದೊಡ್ಡೆನಕುಂಡಿಯಲ್ಲಿ ಕೋದಂಡರಾಮ ದೇವಸ್ಥಾನದ ಹತ್ತಿರ ಗುಂಪು ಸೇರಿ ಆಯೋಗದ ಅನುಮತಿ ಪಡೆಯದೆ ಚುನಾವಣಾ ಪ್ರಚಾರ ನಡೆಸಿದ್ದರು ಎಂದು ದೂರಿನಲ್ಲಿ ಹೇಳಿದ್ದಾರೆ.
SCROLL FOR NEXT