ರಾಹುಲ್ ಗಾಂಧಿ 
ಕರ್ನಾಟಕ

ಮೋದಿ ಆಡಳಿತಾವಧಿಯಲ್ಲಿ ಪ್ರತಿದಿನ 27 ಸಾವಿರ ಯುವಜನಾಂಗದ ಉದ್ಯೋಗಕ್ಕೆ ಕುತ್ತು - ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ಪ್ರತಿದಿನ 27 ಸಾವಿರ ಯುವಜನಾಂಗ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಚಿಕ್ಕೋಡಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ಪ್ರತಿದಿನ 27 ಸಾವಿರ ಯುವಜನಾಂಗ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಉದ್ಯೋಗ ಬಗ್ಗೆ ಮಾತನಾಡುತ್ತಾರೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಒದಗಿಸುವುದಾಗಿ ಹೇಳುತ್ತಾರೆ. ಜಿಎಸ್ ಟಿ, ನೋಟ್ ಅಮಾನ್ಯತೆ ಜಾರಿಯಾದ ಬಳಿಕ ಸಣ್ಣ, ಮಧ್ಯಮ ಕೈಗಾರಿಕೆಗಳು ಹಾಳಾಗಿದ್ದು,  ಲಕ್ಷಾಂತರ ಯುವಕರು ನಿರುದ್ಯೋಗಿಗಳಾಗಿದ್ದಾರೆ ಎಂದರು.

ಗಬ್ಬರ್ ಸಿಂಗ್ ಟ್ಯಾಕ್ಸ್ ಹಾಗೂ ನೋಟ್ ಅಮಾನ್ಯತೆಯಿಂದಾಗಿ ಜನರ ಜೇಬಿಯಿಂದ ಹಣವನ್ನು ಪ್ರಧಾನಿ ಮೋದಿ ದೋಚಿದ್ದು, ನಾವು ಅದನ್ನು ಪುನರುಕ್ತಿಗೊಳಿಸುತ್ತೇವೆ.ನ್ಯಾಯ್ ಯೋಜನೆ ಬಡತನದ ಮೇಲಿನ ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಇದರಿಂದ ದೇಶದಲ್ಲಿ ಬಡತನ ನಿರ್ಮೂಲನೆ ಆಗಲಿದೆ. 25 ಕೋಟಿ ಜನರು ಇದರ ಲಾಭ ಪಡೆಯಲಿದ್ದಾರೆ ಎಂದು ಹೇಳಿದರು.

ನರೇಂದ್ರ ಮೋದಿ ಧರ್ಮದ ಮಾತನಾಡುತ್ತಾರೆ. ಆದರೆ, ಎಲ್ ಕೆ ಅಡ್ವಾಣಿಗೆ ಹೇಗೆ ಮಾಡಿದ್ರು ಎಂಬುದನ್ನ ನೋಡಿದ್ದೇವೆ. ಅವರನ್ನು ಮೋದಿ ಗೌರವಿಸುವುದಿಲ್ಲ, ಎಲ್ಲೋ ಬೇರೆ ಕಡೆ ನೋಡುವುದನ್ನು ಆರಂಭಿಸುತ್ತಾರೆ. ನಂತರ ಧರ್ಮದ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಹೇಳಲೂ ಬೇರೆ ಏನೂ ಇಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

CSK ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ ಧೋನಿ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; 'ಅನಿವಾರ್ಯ ಕಾರಣ' ಎಂದ ವಿವಿ