ಕುಮಾರಸ್ವಾಮಿ 
ಕರ್ನಾಟಕ

ಬಾಲಾಕೋಟ್‌ನ ಯಾವುದೋ ಕಾಡಿನಲ್ಲಿ ಬಾಂಬ್ ಹಾಕಿ ಬಂದಿದ್ದಾರೆ? ನಮಗೆ ಗೊತ್ತಿಲ್ವ: ಸಿಎಂ ಕುಮಾರಸ್ವಾಮಿ

ಭಾರತೀಯ ಯೋಧರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಭಾರತೀಯ ವಾಯುಸೇನೆಯ ದಾಳಿಯನ್ನೇ ಪ್ರಶ್ನಿಸುವಂತಾ ಮಾತುಗಳನ್ನು ಆಡಿದ್ದಾರೆ.

ಹುಬ್ಬಳ್ಳಿ: ಭಾರತೀಯ ಯೋಧರ ಕುರಿತು ಹೇಳಿಕೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾರತೀಯ ವಾಯುಸೇನೆಯ ದಾಳಿಯನ್ನೇ ಪ್ರಶ್ನಿಸುವಂತಾ ಮಾತುಗಳನ್ನು ಆಡಿದ್ದಾರೆ.
2014ರಲ್ಲಿ ಸಂಪೂರ್ಣ ಬಹುಮತ ಮತ್ತು ಬೆಂಬಲದೊಂದಿಗೆ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದಿತ್ತು. ಇಂದಿರಾಗಾಂಧಿಯವರ ನಂತರ ಸಂಪೂರ್ಣ ಸ್ವಾತಂತ್ರ್ಯ ಮೋದಿಯವರಿಗೆ ಸಿಕ್ಕಿದ್ದು, ಅವರೇಕೆ ಸದ್ವಿನಿಯೋಗ ಮಾಡಿಕೊಳ್ಳಲಿಲ್ಲ. ಕಳೆದ 5 ವರ್ಷಗಳಲ್ಲಿ ದೇಶದ ಮತ್ತು ಈ ರಾಜ್ಯದ ಜನತೆಗೆ ಏನೇನು ಮಾಡಿದ್ದೇವೆ ಎಂದು ಹೇಳಿಕೊಳ್ಳಲು ಅವರಲ್ಲೇನು ಇಲ್ಲ. ಅದಕ್ಕೆ ನಮ್ಮ ಮೇಲೆ ವೃಥಾ ಆರೋಪ ಮಾಡಿ ಮತದಾರರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ. 
ಹುತಾತ್ಮ ಯೋಧರ ಹೆಸರಿನಲ್ಲಿ, ಸೇನೆಯ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಪಾಕಿಸ್ತಾನದ ಬಾಲಾಕೋಟ್ ಬಗ್ಗೆ ಇಲ್ಲಿ ಕುಳಿತ ಜನರಿಗೇನು ಗೊತ್ತಿಲ್ಲ. ಅಲ್ಲಿ ಯಾವುದೋ ಕಾಡಿನಲ್ಲಿ ಬಾಂಬ್ ಹಾಕಿ ಬಂದಿದ್ದಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಸೇನೆಯ ದಾಳಿಯನ್ನೇ ಪ್ರಶ್ನಿಸಿದ್ದಾರೆ.
ದೇಶದ ಜನತೆ ಮುಂದೆ ಕೇಂದ್ರ ಸರ್ಕಾರ ಮತ್ತು ಮೋದಿಯವರು ಸಂಪೂರ್ಣ ವಾಸ್ತವ ಸುದ್ದಿಯನ್ನು ನೀಡಲೇ ಇಲ್ಲ. ಮಾಧ್ಯಮದಲ್ಲಿ ಬಂದ ಸುದ್ದಿಯನ್ನು ಕೇಳಿ, ನೋಡಿ ನಾವೆಲ್ಲ ತಿಳಿದುಕೊಂಡಿದ್ದೇವಷ್ಟೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT