ಕೆ.ರತ್ನಪ್ರಭಾ 
ಕರ್ನಾಟಕ

ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರ: ಕೆ. ರತ್ನಪ್ರಭ ಬಿಜೆಪಿ ಅಭ್ಯರ್ಥಿ?

ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರನ್ನು ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ...

ಬೆಂಗಳೂರು: ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರನ್ನು ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ.
ಉಮೇಶ್ ಜಾಧವ್ ಅವರಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರದ ಚುನಾವಣೆ ಮೇ 19 ರಂದು ನಡೆಯಲಿದ್ದು ರತ್ನಪ್ರಭಾ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳ ತಿಳಿಸಿವೆ. ರತ್ನಪ್ರಭಾ ಅವರು ಇದರ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. 
ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದಿದ್ದ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈಗ ಅವರು ಕಲಬುರಗಿ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಮೊದಲು ರತ್ನಪ್ರಭಾ ಅವರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿತ್ತು ಎಂಬ ಮಾತುಗಳು ಕೇಳಿಬರುತ್ತಿತ್ತು.
ಇದರ ಜೊತೆಗೆ ಇತ್ತೀಚೆಗೆ ನಿಧನರಾದ ಸಚಿವ ಶಿವಳ್ಳಿ ಅವರಿಂದ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಚುನಾವಣೆಯು ಮೇ 19 ರಂದೇ ನಡೆಯಲಿದ್ದು, ಈ ಎರಡೂ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!