ಸಂಗಣ್ಣ ಕರಡಿ ಮತ್ತು ರಾಜಶೇಖರ್ ಹಿತ್ನಾಳ್ 
ಕರ್ನಾಟಕ

ಕೊಪ್ಪಳ ಕ್ಷೇತ್ರದಲ್ಲಿ ಜಾತಿ ರಾಜಕೀಯದ್ದೇ ಮೇಲಾಟ: ಕರಡಿಗೆ ಮೋದಿ, ಹಿಟ್ನಾಳ್ ಗೆ ಕೈ'ಬಲ'

ವಿಜಯನಗರ ಸಾಮ್ರಾಜ್ಯದ ಭಾಗವಾದ ಕೊಪ್ಪಳ ಲೋಕಸಭೆ ಕ್ಷೇತ್ರ, ಹೈದರಾಬಾದ್ -ಕರ್ನಾಟಕ ಭಾಗದ ಹಿಂದುಳಿದ ಜಿಲ್ಲೆಯಾಗಿದೆ, 8 ವಿಧಾನಸಭೆ ಕ್ಷೇತ್ರ ...

ಕೊಪ್ಪಳ: ವಿಜಯನಗರ ಸಾಮ್ರಾಜ್ಯದ ಭಾಗವಾದ ಕೊಪ್ಪಳ ಲೋಕಸಭೆ ಕ್ಷೇತ್ರ, ಹೈದರಾಬಾದ್ -ಕರ್ನಾಟಕ ಭಾಗದ ಹಿಂದುಳಿದ ಜಿಲ್ಲೆಯಾಗಿದೆ, 8 ವಿಧಾನಸಭೆ ಕ್ಷೇತ್ರ ಹೊಂದಿರುಪವ ಕೊಪ್ಪಳ ಲೋಕಸಭೆ ಕ್ಷೇತ್ರದ ಜನತೆ ಏಪ್ರಿಲ್ 23 ರಂದು ನಡೆಯುವ ಚುನಾವಣೆ.ಯಲ್ಲಿ ಮತ ಚಲಾಯಿಸಲು ಸಿದ್ಧತೆ ನಡೆಸಿದ್ದಾರೆ.
ಇಲ್ಲಿನ ಮತದಾರರಿಗೆ ಅಭ್ಯರ್ಥಿ,  ಹಾಗೂ ಅವರ ಪ್ರಣಾಳಿಕೆಗಳು ಮುಖ್ಯವಲ್ಲ, ನೋಟು ಅಮಾನ್ಯೀಕರಣ ಮತ್ತು ಜಿಎಸ್ ಟಿ ಯುವಕರ ಮೇಲೆ ಪ್ರಭಾವ ಬೀರಿದೆ. ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳು ಕೂಡ ಪ್ರಮುಖ ಪಾತ್ರ ವಹಿಸುತ್ತವೆ, 2009ರ  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿತು, ನಂತರ 2009 ಮತ್ತು 2014 ರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.
ಈ ಬಾರಿಯ ಚುನಾವಣೆ ಕರಡಿ ಮತ್ತು ಹಿಟ್ನಾಳ್ ಕುಟುಂಬಗಳ ಕದನವೆಂದೇ ಪರಿಗಣಿಸಲ್ಪಟ್ಟಿದೆ.  ಕೊನೆ ಗಳಿಗೆಯಲ್ಲಿ ಟಿಕೆಟ್ ಪಡೆದ ಕರಡಿ ಸಂಗಣ್ಣ ಅವರು ಮೋದಿ ಅಲೆ ನೆಚ್ಚಿಕೊಂಡಿದ್ದಾರೆ, ಕಾಂಗ್ರೆಸ್ ಅಬ್ಯರ್ಥಿ ರಾಜಶೇಖರ್ ಹಿಟ್ನಾಳ್, ಸಿದ್ದರಾಮಯ್ಯ ನಾಮಬಲ ನಂಬಿದ್ದಾರೆ.
ನಮ್ಮ ಪಕ್ಷದಲ್ಲಿ ಯಾವುದೇ ಬಿರುಕಿಲ್ಲ, ಕಾಂಗ್ರೆಸ್ ಸೋಲಿಸುವುದೇ ನಮ್ಮ ಗುರಿ, ಕಳೆದ ಐದು ವರ್ಷದಲ್ಲಿ ಕೊಪ್ಪಳ-ಗಂಗಾವತಿ ರೈಲ್ವೆ ಮಾರ್ಗ ಪೂರ್ಣಗೊಳಿಸಿದ್ದೇವೆ ಎಂದು ಕರಡಿ ಸಂಗಣ್ಣ ಹೇಳಿದ್ದಾರೆ.
ವ್ಯಕ್ತಿಗತ ಟೀಕೆ ಇಲ್ಲದೇ ಸಿದ್ದರಾಮಯ್ಯ ಮೋದಿ ನಡುವಿನ ಚುನಾವಣೆ ಎಂದು ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ  ಕುರುಬ ಸಮಾಜಕ್ಕೆ ಸೇರಿದ್ದು, ಆ ಸಮಾಜದವರು ಸಂಘಟಿತರಾಗಿದ್ದಾರೆ, ಹೀಗಾಗಿ ನಮ್ಮ ಗೆಲುವು ಸುಲಭವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT