ಸಾಂದರ್ಭಿಕ ಚಿತ್ರ 
ಕರ್ನಾಟಕ

ಯಾದಗಿರಿ: ಚುನಾವಣಾ ಕರ್ತವ್ಯದ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು

ಯಾದಗಿರಿ ಜಿಲ್ಲೆಯ ಸುರಪುರದ ಎಸ್ ಪಿ ಕಾಲೇಜಿನಲ್ಲಿ ಮತಯಂತ್ರಗಳ ಮಸ್ಟರಿಂಗ್ ವೇಳೆ ಶಾಲಾ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ....

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರದ ಎಸ್ ಪಿ ಕಾಲೇಜಿನಲ್ಲಿ ಮತಯಂತ್ರಗಳ ಮಸ್ಟರಿಂಗ್ ವೇಳೆ ಶಾಲಾ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಆಳಂದ ತಾಲೂಕಿನ ನಿವಾಸಿ ಶಿವಪುತ್ರ(50) ಮೃತ ಶಾಲಾ ಶಿಕ್ಷಕರು. ಶಿವಪುತ್ರ ಅವರು ಶಹಾಪುರ ತಾಲೂಕಿನ ಹಳೇಸಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಾರ್ಯಕ್ಕೆ ಅವರು ನಿಯೋಜನೆಯಾಗಿದ್ದರು.
ನಾಳೆ ಮತದಾನ ಹಿನ್ನಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಲು ಸುರಪುರದ ಎಸ್.ಪಿ ಕಾಲೇಜು ಮೈದಾನಕ್ಕೆ ಬಂದಿದ್ದರು. ಮತಯಂತ್ರಗಳ ಮಾಸ್ಟರಿಂಗ್ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ಏಕಾಏಕಿ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೊದಲಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ವೇಳೆ(ಏಪ್ರಿಲ್ 18) ಚಾಮರಾಜ ನಗರದಲ್ಲಿ ಮತಗಟ್ಟೆ ಅಧಿಕಾರಿ ಶಾಂತಮೂರ್ತಿ(48) ಹೃದಯಾಘಾತದಿಂದ ಮೃತಪಟ್ಟಿದ್ದರು. ಸುಲ್ತಾನ ಷರೀಫ್ ಸರ್ಕಲ್ ಬಳಿ ಮತಗಟ್ಟೆ ಸಂಖ್ಯೆ 48 ರಲ್ಲಿ ಇವರು ಚುನಾವಣಾ ಕರ್ತವ್ಯ ನಿರ್ವಹಿಸುವಾಗ ಸಾವನ್ನಪ್ಪಿದ್ದರು. ಶಾಂತಮೂರ್ತಿ ಹನೂರು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಚುನಾವಣಾ ತರಬೇತಿ ವೇಳೆ ಕೆಕ್ಕಲಕೋಟೆ ಗ್ರಾಮದ  ಶಿಕ್ಷಕ ಬಿ.ರಮೇಶ್(46) ಸಾವನ್ನಪ್ಪಿದ್ದರು. ಬಿ.ರಮೇಶ್ ಅವರು ಸಿರಗುಪ್ಪದ ಆರನೇ ವಾರ್ಡಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದರು. ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಪೂಲಿಂಗ್ ಆಫೀಸರ್ ಆಗಿ ನೇಮಕವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ; ಶಾಸಕ ರವಿಕುಮಾರ್ ಗಣಿಗ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT