ಸಾಂದರ್ಭಿಕ ಚಿತ್ರ 
ಕರ್ನಾಟಕ

ಲಿಂಗಾಯತ ಮತಗಳ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ವಾಗ್ಯುದ್ಧ

ಲಿಂಗಾಯತ ಪಂಚಮಸಾಲಿ ಗುಂಪಿನ ಮತಗಳನ್ನುಕ್ರೂಢೀಕರಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ, ಲಿಂಗಾಯತ ಸಮುದಾಯದ ಇತರ ಸಮುದಾಯದ ಮತಗಳ ಮೇಲೂ ಕಣ್ಣಿಟ್ಟಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯ ಲಿಂಗಾಯತ ನಾಯಕರ ನಡುವೆ ವಾಗ್ಯುದ್ಧವೇ ನಡೆಯುತ್ತಿದೆ.

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಗುಂಪಿನ ಮತಗಳನ್ನುಕ್ರೂಢೀಕರಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ, ಲಿಂಗಾಯತ ಸಮುದಾಯದ  ಇತರ ಸಮುದಾಯದ ಮತಗಳ ಮೇಲೂ ಕಣ್ಣಿಟ್ಟಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯ ಲಿಂಗಾಯತ ನಾಯಕರ ನಡುವೆ ವಾಗ್ಯುದ್ಧವೇ ನಡೆಯುತ್ತಿದೆ.

ಕೆಲ ದಿನಗಳ ಹಿಂದೆ ಲಿಂಗಾಯತ ಸಮುದಾಯದ ಸಭೆಯಲ್ಲಿ ಜಗದೀಶ್ ಶೆಟ್ಟರ್, ಅರವಿಂದ ಬೆಲ್ಲಾದ ಮತ್ತಿತರ ಮುಖಂಡರನ್ನು ಪ್ರಹ್ಲಾದ್ ಜೋಷಿ ಸೇವಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ವಿನಯ್ ಕುಲಕರ್ಣಿ ವೈಯಕ್ತಿಕ ದಾಳಿ ನಡೆಸಿದ  ನಂತರ ಈ ವಿವಾದ ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಹೇಳಿಕೆ ನೀಡುವ ಮುನ್ನ ಅಷ್ಟಾಗಿ  ಗಂಭೀರತೆ ಪಡೆದುಕೊಂಡಿರಲಿಲ್ಲ,

ವಿನಯ್ ಕುಲಕರ್ಣಿ ಜಾತಿ ಕಾರ್ಡ್ ನಲ್ಲಿ ಆಟ ಆಡುತ್ತಿರುವುದು ಖಂಡನಾರ್ಹವಾದದ್ದು ಎಂದು ಜಿಲ್ಲೆಯ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತರಿಗೆ ಯಾವಾಗಲೂ ಉತ್ತಮ ಮನ್ನಣೆ ದೊರಕಿಸಿದೆ.ಆದ್ದರಿಂದಲೇ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್  ಮುಖ್ಯಮಂತ್ರಿಯಾಗಲು ಸಾಧ್ಯವಾಗಿತ್ತು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಲಿಂಗಾಯತ- ವೀರಶೈವ ಸಮುದಾಯವನ್ನು ಹೊಡೆಯಲು ಯತ್ನಿಸುತ್ತಿದ್ದಾರೆ ಎಂದು ಶಾಸಕ ಅರವಿಂದ್ ಬೆಲ್ಲಾದ್  ಆರೋಪಿಸಿದ್ದಾರೆ. ಲಿಂಗಾಯತ ಭಾವನೆಗಳಿಗೆ ಧಕ್ಕೆ ತಂದವರು ಈಗ  ಸಮುದಾಯವನ್ನು ಒಗ್ಗೂಡಿಸುವ ಮೂಲಕ ಬಿಜೆಪಿಯನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ ವಿನಯ್ ಕುಲಕರ್ಣೀ ಅವರನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ ಲಿಂಗಾಯತ ಶಾಸಕರ ವಿರುದ್ಧ ಹಿರಿಯ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕರು ಲಿಂಗಾಯತ ಮತಗಳ ಮೇಲೆಯೇ ಹೆಚ್ಚಿನ ಕಣ್ಣಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT