ಗಾವಳಿ ಗ್ರಾಮದ ಒಂದು ಮತಗಟ್ಟೆ 
ಕರ್ನಾಟಕ

ಮಹಾ ಚುನಾವಣೆ: ಖಾನಾಪುರದ 12 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಬೆಳಗಾವಿಯ ಖಾನಪುರದ ತಾಲ್ಲೂಕಿನ 12 ಗ್ರಾಮಗಳ ನಿವಾಸಿಗಳು ಮಂಗಳವಾರ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಬೆಳಗಾವಿ: ಬೆಳಗಾವಿಯ ಖಾನಪುರದ ತಾಲ್ಲೂಕಿನ 12 ಗ್ರಾಮಗಳ ನಿವಾಸಿಗಳು ಮಂಗಳವಾರ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.
"ನಾವು ನಮ್ಮ ಕುಟುಂಬ ಈ ಗ್ರಾಮಗಳಲ್ಲಿದ್ದೇವೆ ಎನ್ನುವುದನ್ನು ಕಳೆದ 60 ವರ್ಷಗಳಿಂದಲೂ ನಮ್ಮ ಜನಪ್ರತಿನಿಧಿಗಳು ಮರೆತಿದ್ದಾರೆ. ಅವರಿಗೆ ನಮ್ಮ ಅಸ್ತಿತ್ವದ ಅರಿವು ಇಲ್ಲ, ಅಲ್ಲದೆ ಅವರಿಗೆ ನಮ್ಮ ಅಮೂಲ್ಯವಾದ ಮತಗಳ ಅಗತ್ಯವಿಲ್ಲ"  ಅಲ್ಲಿನ ನಿವಾಸಿಗಳು ಹೇಳುತ್ತಾರೆ.
ಖಾನಾಪುರ ತಾಲೂಕಿನ ಗಾವಳಿ, ಕೃಷ್ನಾಪುರ, ಪಸ್ತೋಲಿ, ಕೊಂಗಲ, ತಳೆವಾಡಿ, ಜೋರ್ಡಾನ, ಸಯಾಚೆ ಮಾಲ, ಚಾಪೋಲಿ, ಕಾಪೋಲಿ, ಮುದಗೈ, ಚಿಲೆಖಾನೆ ಹಾಗೂ ಆಂಗಾನ್ ಗ್ರಾಮಗಳ ಯಾವೊಬ್ಬ ಮತದಾರರೂ ಈ ಬಾರಿ ಮತ ಚಲಾವಣೆ ಮಾಡಿಲ್ಲ. ತಮ್ಮನ್ನು ನಿರ್ಲಕ್ಷಿಸಿದ್ದಕ್ಕಾಗಿ ಅವರು ಈ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
"ನಾವು ಕಳೆದ ಆರು ದಶಕಗಳಿಂದ ಈ ಹಳ್ಳಿಗಳಲ್ಲಿ ವಾಸವಿದ್ದೇವೆ. ಆದರೆ ಈ ಗ್ರಾಮಗಳಿಗೆ ಸರಿಯಾದ ರಸ್ತೆ ಸಂಪರ್ಕವಿಲ್ಲ, ವಿದ್ಯುತ್ ಸಂಪರ್ಕವಿಲ್ಲ, ಶಾಲೆಗಳಿಲ್ಲ, ವೈದ್ಯಕೀಯ ಸೌಲಭ್ಯಗಳಿಲ್ಲ. ಇಂತಹಾ ಮೂಲಭೂತ ಸೌಕರ್ಯವನ್ನೂ ಕಲ್ಪಿಸದ ನಮ್ಮ ಜನನಾಯಕರಿಗೆ ನಾವೇಕೆ ಮತ ಹಾಕಬೇಕು" ಅವರು ಪ್ರಶ್ನಿಸುತ್ತಾರೆ.
ಹಳ್ಳಿಗರನ್ನು ಮನವೊಲಿಸಲು ಚುನಾವಣಾ ಆಯೋಗದ ಅಧಿಕಾರಿಗಳು ಗ್ರಾಮಗಳಿಗೆ ಬಂದಿದ್ದರು, ಆದರೆ ಹಳ್ಳಿಗರು ಚುನಾವಣೆ ಬಹಿಷ್ಕರಿಸುವ ನಿರ್ಧಾರದಿಂಡ ಹಿಂದೆ ಸರಿಯಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT