ಗಾವಳಿ ಗ್ರಾಮದ ಒಂದು ಮತಗಟ್ಟೆ 
ಕರ್ನಾಟಕ

ಮಹಾ ಚುನಾವಣೆ: ಖಾನಾಪುರದ 12 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಬೆಳಗಾವಿಯ ಖಾನಪುರದ ತಾಲ್ಲೂಕಿನ 12 ಗ್ರಾಮಗಳ ನಿವಾಸಿಗಳು ಮಂಗಳವಾರ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಬೆಳಗಾವಿ: ಬೆಳಗಾವಿಯ ಖಾನಪುರದ ತಾಲ್ಲೂಕಿನ 12 ಗ್ರಾಮಗಳ ನಿವಾಸಿಗಳು ಮಂಗಳವಾರ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.
"ನಾವು ನಮ್ಮ ಕುಟುಂಬ ಈ ಗ್ರಾಮಗಳಲ್ಲಿದ್ದೇವೆ ಎನ್ನುವುದನ್ನು ಕಳೆದ 60 ವರ್ಷಗಳಿಂದಲೂ ನಮ್ಮ ಜನಪ್ರತಿನಿಧಿಗಳು ಮರೆತಿದ್ದಾರೆ. ಅವರಿಗೆ ನಮ್ಮ ಅಸ್ತಿತ್ವದ ಅರಿವು ಇಲ್ಲ, ಅಲ್ಲದೆ ಅವರಿಗೆ ನಮ್ಮ ಅಮೂಲ್ಯವಾದ ಮತಗಳ ಅಗತ್ಯವಿಲ್ಲ"  ಅಲ್ಲಿನ ನಿವಾಸಿಗಳು ಹೇಳುತ್ತಾರೆ.
ಖಾನಾಪುರ ತಾಲೂಕಿನ ಗಾವಳಿ, ಕೃಷ್ನಾಪುರ, ಪಸ್ತೋಲಿ, ಕೊಂಗಲ, ತಳೆವಾಡಿ, ಜೋರ್ಡಾನ, ಸಯಾಚೆ ಮಾಲ, ಚಾಪೋಲಿ, ಕಾಪೋಲಿ, ಮುದಗೈ, ಚಿಲೆಖಾನೆ ಹಾಗೂ ಆಂಗಾನ್ ಗ್ರಾಮಗಳ ಯಾವೊಬ್ಬ ಮತದಾರರೂ ಈ ಬಾರಿ ಮತ ಚಲಾವಣೆ ಮಾಡಿಲ್ಲ. ತಮ್ಮನ್ನು ನಿರ್ಲಕ್ಷಿಸಿದ್ದಕ್ಕಾಗಿ ಅವರು ಈ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
"ನಾವು ಕಳೆದ ಆರು ದಶಕಗಳಿಂದ ಈ ಹಳ್ಳಿಗಳಲ್ಲಿ ವಾಸವಿದ್ದೇವೆ. ಆದರೆ ಈ ಗ್ರಾಮಗಳಿಗೆ ಸರಿಯಾದ ರಸ್ತೆ ಸಂಪರ್ಕವಿಲ್ಲ, ವಿದ್ಯುತ್ ಸಂಪರ್ಕವಿಲ್ಲ, ಶಾಲೆಗಳಿಲ್ಲ, ವೈದ್ಯಕೀಯ ಸೌಲಭ್ಯಗಳಿಲ್ಲ. ಇಂತಹಾ ಮೂಲಭೂತ ಸೌಕರ್ಯವನ್ನೂ ಕಲ್ಪಿಸದ ನಮ್ಮ ಜನನಾಯಕರಿಗೆ ನಾವೇಕೆ ಮತ ಹಾಕಬೇಕು" ಅವರು ಪ್ರಶ್ನಿಸುತ್ತಾರೆ.
ಹಳ್ಳಿಗರನ್ನು ಮನವೊಲಿಸಲು ಚುನಾವಣಾ ಆಯೋಗದ ಅಧಿಕಾರಿಗಳು ಗ್ರಾಮಗಳಿಗೆ ಬಂದಿದ್ದರು, ಆದರೆ ಹಳ್ಳಿಗರು ಚುನಾವಣೆ ಬಹಿಷ್ಕರಿಸುವ ನಿರ್ಧಾರದಿಂಡ ಹಿಂದೆ ಸರಿಯಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT