ಇವಿಎಂ ಎಡವಟ್ಟು, ಬಿಜೆಪಿ ಅಭ್ಯರ್ಥಿಯ ಚಿತ್ರದ ಮುಂದೆ ಶಾಯಿ ಗುರುತು ಪತ್ತೆ 
ಕರ್ನಾಟಕ

ರಾಯಚೂರಲ್ಲಿ ಇವಿಎಂ ಎಡವಟ್ಟು, ಬಿಜೆಪಿ ಅಭ್ಯರ್ಥಿಯ ಚಿತ್ರದ ಮುಂದೆ ಶಾಯಿ ಗುರುತು ಪತ್ತೆ

ಆಘಾತಕಾರಿ ಘಟನೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇಡಲಾಗಿದ್ದ ಇವಿಎಂ ಮತಯಂತ್ರದ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾದ ರಾಜಾ ಅಮರೇಶ್ವರ ನಾಯಕ್....

ರಾಯಚೂರು: ಆಘಾತಕಾರಿ ಘಟನೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇಡಲಾಗಿದ್ದ ಇವಿಎಂ ಮತಯಂತ್ರದ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾದ ರಾಜಾ ಅಮರೇಶ್ವರ ನಾಯಕ್  ಚಿತ್ರದ ಮುಂದೆ ನೀಲಿ ಶಾಯಿ ಬಣ್ಣವಿರುವುದು ಪತ್ತೆಯಾಗಿದ್ದು ಅನುಮಾನಕ್ಕೆ ಎಡೆಮಾಡಿದೆ.
ಕಾರವಾರದಲ್ಲಿ ಓರ್ವ ವ್ಯಕ್ತಿ ಮತ ಹಾಕುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಘಟನೆ ಬೆನ್ನಲ್ಲೇ ರಾಯಚೂರಿನಲ್ಲಿ ಈ ಘಟನೆ ಬೆಳಕು ಕಂಡಿದೆ. 1951 ರ ಜನಪ್ರತಿನಿಧಿ ಕಾಯಿದೆ ಉಲ್ಲಂಘನೆಯಾಗಿರುವ ಈ ಪ್ರಕರಣ ಲಿಂಗಸಗೂರು ವಿಧಾನಸಭೆ ಕ್ಷೇತ್ರದ ಮತಗಟ್ಟೆ 17 ನಲ್ಲಿ ನಡೆದಿದೆ.
ಬಿಜೆಪಿ ಅಭ್ಯರ್ಥಿಯ ಚಿತ್ರದ ಮುಂದೆ ಶಾಯಿ ಗುರುತಿರುವ ಇವಿಎಂ ಚಿತ್ರದ ದೃಶ್ಯಗಳು ಸಾಮಾಜಿಕ ತಾಣದಲ್ಲಿ ಬೆಳಗಿನ 11 ಗಂಟೆಯಿಂದ  ಹರಿದಾಡಲು ಪ್ರಾರಂಭಿಸಿದ್ದು ಈ ಸಂಬಂಧ ಹಟ್ಟಿ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಿಟರ್ನಿಂಗ್ ಆಫೀಸರ್ (ಆರ್.ಒ) ಶರತ್ ಬಿ. ಮತಗಟ್ಟೆ ವಿವರಗಳನ್ನು ಕೇಳಿದ್ದರು. ಇದಾಗಿ ಅರ್ಧ ಗಂಟೆಯ ಬಳಿಕ ರಾಯಚೂರು ಜಿಲ್ಲಾಧಿಕಾರಿಗಳು ಅಚಾತುರ್ಯ ನಡೆದ ಮತಗಟ್ಟೆಯ ಪತ್ತೆಯಾಗಿದ್ದು ವೀಡಿಯೋ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದಾಗಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಆದರೆ ಇವಿಎಂ ನಲ್ಲಿ ನೀಲಿ ಗುರುತು ಬಂದದ್ದು ಹೇಗೆ ಎನ್ನುವುದನ್ನು ಅವರು ತಿಳಿಸಿಲ್ಲ, ಅಲ್ಲದೆ ಆರೋಪಿಯ ವಿವರವನ್ನೂ ಸಹ ಅವರು ಬಹಿರಂಗಪಡಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT