ಯಶ್ 
ಕರ್ನಾಟಕ

ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗಲ್ಲ: ನಟ ಯಶ್ ಈಗ ಗುಡುಗಿದ್ದೇಕೆ?

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗುವುದಿಲ್ಲ.

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗುವುದಿಲ್ಲ. ಒಂದು ವೇಳೆ ನನ್ನ ತಂಟೆಗೆ ಬಂದರೆ ನಾನು ಕೂಡ ಸುಮ್ಮನೆ ಇರೋದಿಲ್ಲ ಎಂದು ಗುಡುಗಿದ್ದಾರೆ.
ವಿಶ್ವ ಭೂ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಡ್ಯ ಲೋಕಸಭೆ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತದೆ ಎಂದು ಆರೋಪಿಸಿದ್ದರು ಎಂದು ಪ್ರಶ್ನಿಸಿದ್ದಕ್ಕೆ ಯಶ್ ಸುಮಲತಾ ಅವರು ತಮ್ಮ ಭಾವನೆಯನ್ನು ಹೇಳಿಕೊಂಡಿದ್ದಾರೆ. ಆದರೆ ನನ್ನನ್ನು ಟಾರ್ಗೆಟ್ ಮಾಡಬೇಕು ಎಂದರೆ ತುಂಬಾ ಕಷ್ಟ ಎಂದಿದ್ದಾರೆ.
ನಾವು ಜನರ ಆಸ್ತಿ. ಅವರಿಂದಲೇ ಬೆಳೆದವರು. ಹಾಗಾಗಿ ನಮ್ಮನ್ನು ಟಾರ್ಗೆಟ್ ಮಾಡುವುದು ಸುಲಭವಲ್ಲ. ಹೇಳಿಕೊಂಡವರೆಲ್ಲಾ ಅವರು ಅಂದುಕೊಂಡಂತೆ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ನಮ್ಮ ತಂಟೆಗೆ ಬಂದರೆ ಅವರು ಕೂಡ ಹುಷಾರಾಗಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT