ಸುಮಲತಾ-ನಿಖಿಲ್ ಕುಮಾರಸ್ವಾಮಿ 
ಕರ್ನಾಟಕ

ರಾಜ್ಯಕ್ಕೆ ಕಾಲಿಟ್ಟಿರುವ 'ಸಟ್ಟಾ ಬಜಾರ್' ಬೆಟ್ಟಿಂಗ್ ದಂಧೆ; ಆತಂಕದಲ್ಲಿ ಹೆಂಗಳೆಯರು

ಪ್ರಜಾಪ್ರಭುತ್ವಕ್ಕೆ ತೀರ ವ್ಯತಿರಿಕ್ತವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ...

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ತೀರ ವ್ಯತಿರಿಕ್ತವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಥವಾ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿನ ಬಗ್ಗೆ ಬೆಟ್ಟಿಂಗ್ ಅಕ್ರಮವಾಗಿ ಜೋರಾಗಿ ನಡೆಯುತ್ತಿದೆ.
ಮಂಡ್ಯ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ಸಟ್ಟಾ ಎಂಬ ಬೆಟ್ಟಿಂಗ್ ಮಾರ್ಕೆಟ್ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಸ್ವತಃ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಆದೇಶ ಹೊರಡಿಸಿದ್ದಾರೆ. 100 ರೂಪಾಯಿಯಿಂದ ಲಕ್ಷಗಳವರೆಗೆ ಬೆಟ್ಟಿಂಗ್ ಜೂಜಾಟ ನಡೆಯುತ್ತಿದ್ದು ಇದನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ವಿಶೇಷ ತಂಡ ರಚಿಸಲಾಗಿದೆ.
ಉತ್ತರ ಭಾರತದಲ್ಲಿ ರಾಜಕೀಯ ಮೂಲಾಧಾರಿತ ಸಟ್ಟಾ ಬಜಾರ್ ಜನಪ್ರಿಯವಾಗಿದ್ದು ಅದು ಕರ್ನಾಟಕಕ್ಕೆ ಈ ವರ್ಷ ಹೊಸದಾಗಿ ಕಾಲಿಟ್ಟಿದೆ, ಲೋಕಸಭೆ ಚುನಾವಣೆಯ ಈ ಸಂದರ್ಭದಲ್ಲಿ ಬೆಟ್ಟಿಂಗ್ ಜೂಜು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.ರಾಜ್ಯದ ಮಂಡ್ಯ, ಹಾಸನ, ತುಮಕೂರು, ಚಿಕ್ಕೋಡಿ ಮತ್ತು ಗುಲ್ಬರ್ಗ ಕ್ಷೇತ್ರಗಳಲ್ಲಿ ಚುನಾವಣಾ ಸಂಬಂಧಿ ಜೂಜಾಟ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು.
ಉದಾಹರಣೆಗೆ ಮಂಡ್ಯ ಜಿಲ್ಲೆಯಲ್ಲಿ, 1 ಲಕ್ಷಕ್ಕೆ ಬೆಟ್ಟಿಂಗ್ ಕಟ್ಟಿದರೆ ಸುಮಲತಾ ಗೆದ್ದರೆ 1ಲಕ್ಷದ 80 ಸಾವಿರ ರೂಪಾಯಿ ಸಿಗುತ್ತದೆ. ನಿಖಿಲ್ ಗೌಡ ಗೆದ್ದರೆ 1 ಲಕ್ಷದ 40 ಸಾವಿರ ಸಿಗುತ್ತದೆ. ನಿಖಿಲ್ ಗೆಲುವಿನ ನಿರೀಕ್ಷೆ ಹೆಚ್ಚಾಗಿರುವುದರಿಂದ ಬೆಟ್ಟಿಂಗ್ ಮೊತ್ತ ಕಡಿಮೆಯಾಗಿದೆ.
ತಮ್ಮ ಗಂಡ ಮತ್ತು ಗಂಡು ಮಕ್ಕಳು ಜಮೀನು, ಆಸ್ತಿ, ದನ ಕರುಗಳು ಮತ್ತು ವಾಹನವನ್ನು ಅಡವಿಟ್ಟು ಬೆಟ್ಟಿಂಗ್ ಕಟ್ಟಿದ್ದಾರೆ ಎಂದು ಬಹುತೇಕ ಮಹಿಳೆಯರಿಂದ ದೂರುಗಳು ಬಂದಿವೆ. ಚುನಾವಣೆ ಫಲಿತಾಂಶ ಬಂದ ಮೇಲೆ ಎಲ್ಲಿ ತಮ್ಮ ಕುಟುಂಬ ಬೀದಿಗೆ ಬರುತ್ತದೋ ಎನ್ನುವ ಆತಂಕ ಹೆಂಗಸರಿಗೆ. ಆನ್ ಲೈನ್ ನಲ್ಲಿ ವಾಟ್ಸಾಪ್ ಆಪ್ ನಲ್ಲಿ ಬೆಟ್ಟಿಂಗ್ ದಂಧೆ ಜೋರಾಗಿದೆ. ಆದರೆ ಇದುವರೆಗೆ ಯಾವುದೇ ರಾಜಕೀಯ ಬೆಟ್ಟಿಂಗ್ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT