ಡಾ. ಉಮೇಶ್ ಜಾಧವ್ 
ಕರ್ನಾಟಕ

ಗೆಲ್ಲುವ ವ್ಯಕ್ತಿಗೆ ಬಿಜೆಪಿಯಿಂದ ಟಿಕೆಟ್: ಮಗನ ಸ್ಪರ್ಧೆಗೆ ಉಮೇಶ್ ಜಾಧವ್ ಸಮರ್ಥನೆ

ನೂರಕ್ಕೆ ನೂರರಷ್ಟು ತಮ್ಮ ಮಗ ಚುನಾವಣೆಯಲ್ಲಿ ಗೆಲ್ಲಲಿದ್ದಾನೆ ಎಂದು ಮಾಜಿ ಶಾಸಕ ಡಾ.ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಮಗನ ಸ್ಪರ್ಧೆಯನ್ನು ಸಮರ್ಥಿಸಿಕೊಂಡಿದ್ದಾರೆ

ಕಲಬುರಗಿ: ಗೆಲ್ಲುವ ವ್ಯಕ್ತಿಗೆ ಟಿಕೆಟ್  ನೀಡುವ ಲೆಕ್ಕಾಚಾರದೊಂದಿಗೆ ಬಿಜೆಪಿ ಪಕ್ಷ  ತಮ್ಮ ಪುತ್ರನಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ನೂರಕ್ಕೆ ನೂರರಷ್ಟು ತಮ್ಮ ಮಗ ಚುನಾವಣೆಯಲ್ಲಿ ಗೆಲ್ಲಲಿದ್ದಾನೆ ಎಂದು ಮಾಜಿ ಶಾಸಕ ಡಾ.ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಮಗನ ಸ್ಪರ್ಧೆಯನ್ನು ಸಮರ್ಥಿಸಿಕೊಂಡಿದ್ದಾರೆ

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಚೋಳಿ ಉಪಚುನಾವಣೆಯಲ್ಲಿ ತಮ್ಮ ಮಗ ಅವಿನಾಶ  ಜಾಧವ್‍ಗೆ  ಟಿಕೆಟ್​ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ಮೊದಲು ತಮ್ಮ ಸಹೋದರನಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸಹೋದರ ರಾಮಚಂದ್ರ ಜಾಧವ್ ಟಿಕೆಟ್ ​  ನಿರಾಕರಿಸಿದ್ದರಿಂದ ಅವಿನಾಶ್​ಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ತಂದೆ-ಮಕ್ಕಳ  ರಾಜಕಾರಣಕ್ಕೆ ತಾವೆಂದೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಮಲ್ಲಿಕಾರ್ಜುನ್ ಖರ್ಗೆ ಅವರ ಅತಿಯಾದ ವ್ಯಾಮೋಹದಿಂದ  ಮಗನನ್ನು ಮಂತ್ರಿ ಮಾಡಿದರು. ಹಾಗಾಗಿ ಇದಕ್ಕೆ ವಿರೋಧ ಮಾಡಿದ್ದೆವು ಎಂದು ಕುಟುಂಬ ರಾಜಕಾರಣವನ್ನು ಸಮರ್ಥನೆ ಮಾಡಿಕೊಂಡರು.ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ 29ರ  ಸೋಮವಾರದಂದು ಅವಿನಾಶ್ ಜಾಧವ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.

ಚಿಂಚೋಳಿ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ಧಿಪಡಿಸುವುದಾಗಿ ಈ ಹಿಂದೆ ಪ್ರಿಯಾಂಕಾ ಖರ್ಗೆ ಭರವಸೆ ನೀಡಿದ್ದರು. ಅದರಂತೆ ಕ್ಷೇತ್ರವನ್ನು ಅವರು ದತ್ತು ಪಡೆಯಲಿಲ್ಲ, ಕ್ಷೇತ್ರದ ಅಭಿವೃದ್ಧಿಗೂ ಸಹಕಾರ ನೀಡಲಿಲ್ಲ ಎಂದು ಆರೋಪಿಸಿದ ಜಾಧವ್,  ಪ್ರಿಯಾಂಕ್ ಖರ್ಗೆ ತಮ್ಮ ಮಗನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲಿಸಲಿ ಎಂದು ಸವಾಲು ಹಾಕಿದರು.

ಇದೇ ವೇಳೆ ಮಾತನಾಡಿದ ಅವಿನಾಶ್​ ಜಾಧವ್​ , ಚಿಂಚೋಳಿ ಕ್ಷೇತ್ರವನ್ನು ತಮ್ಮ ತಂದೆ ಅಭಿವೃದ್ಧಿ ಮಾಡಿದ್ದಾರೆ. ಈಗ ತಮಗೆ ಕೆಲಸ ಮಾಡುವುದಕ್ಕೆ ಅವಕಾಶ ಮಾಡಿ  ಕೊಡುತ್ತಿದ್ದಾರೆ.ರಾಜಕೀಯ ಎಂದರೆ ಅಭಿವೃದ್ಧಿ ಮಾತ್ರ ಎಂದು ತಿಳಿದುಕೊಂಡಿದ್ದೇನೆ. ಯುವಕರು  ರಾಜಕೀಯಕ್ಕೆ ಹೆಚ್ಚು ಬರುತ್ತಿದ್ದು, ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT