ಶಂಕರ್ ಮುನವಳ್ಳಿ 
ಕರ್ನಾಟಕ

ಕಾಂಗ್ರೆಸ್ ಅಭ್ಯರ್ಥಿಗಳ ಬಿ ಫಾರಂ ತಡೆಹಿಡಿಯಿರಿ: ಹೈಕೋರ್ಟ್ ಮೆಟ್ಟಿಲೇರಿದ ಶಂಕರ ಮುನವಳ್ಳಿ

ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಬಿ ಫಾರಂ ಅನ್ನು ತಡೆ ಹಿಡಿಯಬೇಕೆಂದು ಪ್ರಸಿದ್ಧ ನಾಯಕ ಬೆಳಗಾವಿಯ ...

ಬೆಳಗಾವಿ: ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಬಿ ಫಾರಂ ಅನ್ನು ತಡೆ ಹಿಡಿಯಬೇಕೆಂದು ಪ್ರಸಿದ್ಧ ನಾಯಕ ಬೆಳಗಾವಿಯ ಶಂಕರ್ ಮುನವಳ್ಳಿ ಧಾರವಾಡ ಹೈಕೋರ್ಟ್ ನಲ್ಲಿ  ಅರ್ಜಿ ಸಲ್ಲಿಸಿದ್ದಾರೆ. 
ಕರ್ನಾಟಕ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ರಾಗಿ ಕಾರ್ಯನಿರ್ವಹಿಸುತ್ತಿರುವ ದಿನೇಶ್‌ ಗುಂಡುರಾವ್‌ ಅವರ ಅಧಿಕಾರ ಮಾನ್ಯತೆ ಪ್ರಶ್ನಿಸಿ ಧಾರವಾಡ ಹೈಕೋರ್ಟ್‌ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಹೇಳಿದರು. 
ಹೈಕೋರ್ಟ್‌ ಪೀಠದಲ್ಲಿ ದಾಖಲಿಸಿರುವ ಅರ್ಜಿಯ ವಿಚಾರಣೆ ಮಾ.28 ರಂದು ನಡೆಯಲಿದೆ. ದಿನೇಶ ಗುಂಡುರಾವ್‌ ಬಿ ಪಾರ್ಮ್‌ ನೀಡುವ ಅಧಿಕಾರ ಹೊಂದಿರುವುದಿಲ್ಲ. ಕಾಲಕಾಲಕ್ಕೆ ನಡೆಯಬೇಕಿದ್ದ ಪಕ್ಷದಲ್ಲಿ ವಿವಿಧ ಹುದ್ದೆಗಳಿಗೆ ಆಂತರಿಕ ಚುನಾವಣೆ ಕೂಡ ನಡೆಸುತ್ತಿಲ್ಲ. ಕೆಪಿಸಿಸಿ ಕಾರ್ಯಚಟುವಟಿಕೆಗಳ ಕುರಿತು 20 ವರ್ಷಗಳಿಂದ ಆದಾಯ ಇಲಾಖೆಗೂ ಲೆಕ್ಕಪತ್ರ ತೋರಿಸಿಲ್ಲ.
ಪಕ್ಷ ಸಂಘಟನೆಗೆ ನೀಡಿರುವ ಧನ ಸಹಾಯವನ್ನೂ ಪಕ್ಷದ ಅಧ್ಯಕ್ಷರು ಮತ್ತು ನಾಯಕರು ದುರುಪಯೋಗ ಪಡಿಸಿಕೊಂಡಿದ್ದಾರೆ. 2015 ರಿಂದ 2017ರ ಅವಧಿಯಲ್ಲಿ ಒಟ್ಟು 24 ಲಕ್ಷ ರೂ.ನೀಡಲಾಗಿತ್ತು. ಆ ಪೈಕಿ 5 ಲಕ್ಷ ರೂ.ಮಾತ್ರ ಮರು ಪಾವತಿಸಿರುವ ಕೆಪಿಸಿಸಿ ಇನ್ನುಳಿದ ದೇಣಿಗೆ ಹಣ ಬಳಕೆ ಕುರಿತು ಮಾಹಿತಿ ನೀಡಿಲ್ಲ. ಆದ್ದರಿಂದ, ಈ ಎಲ್ಲ ನ್ಯೂನತೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅದಕ್ಕೂ ಮುಂಚೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದಿನೇಶ ಗುಂಡೂರಾವ್‌ ಅವರು ನೀಡುವ ಬಿ ಫಾರ್ಮ್‌ ವಿತರಣೆಗೂ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT