ಅನಿತಾ ಕುಮಾರಸ್ವಾಮಿ, ಸಿದ್ದರಾಮಯ್ಯ 
ಕರ್ನಾಟಕ

ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅನಿತಾ ಕುಮಾರಸ್ವಾಮಿ; ಮಗನ ಗೆಲುವಿಗೆ ಸಹಕಾರ ಕೋರಿಕೆ?

ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ...

ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ.
 ಮಂಡ್ಯ ಚುನಾವಣಾ ಅಖಾಡಕ್ಕಿಳಿದಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯವನ್ನು ಹೇಗಾದರೂ ಮಾಡಿ ಗೆಲ್ಲಿಸಲು ಹಿಂದುಳಿದ ದಲಿತ ಹಾಗೂ ಅಲ್ಪ ಸಂಖ್ಯಾತ ಮತಗಳನ್ನ ಸೆಳೆಯಲು ಸಿದ್ದರಾಮಯ್ಯ ನೆರವು ಕೋರಲು ಅನಿತಾ ಕುಮಾರಸ್ವಾಮಿ ಸಿದ್ದರಾಮಯ್ಯ ಬಳಿಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ.
 ನಿಖಿಲ್ ಕುಮಾರಸ್ವಾಮಿ ನಾಳೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದು ಈ ಸಂದರ್ಭದಲ್ಲಿ ಮಂಡ್ಯಕ್ಕೆ ಬರುವಂತೆ ಅನಿತಾ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯದಲ್ಲಿ ಈಗಾಗಲೇ ಹಲವು ಕಾಂಗ್ರೆಸ್ ಮುಖಂಡರು ಸುಮಲತಾಗೆ ಬೆಂಬಲ ನೀಡುವುದಾಗಿ ಹೇಳುತ್ತಿದ್ದು ಇದರಿಂದ ತಮ್ಮ ಮಗನ ಗೆಲುವಿಗೆ ಭಾರೀ ಹೊಡೆತ ಬೀಳಬಹುದು ಎಂದು ಅರಿತಿರುವ ಹೆಚ್ ಡಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅದನ್ನು ಸರಿಪಡಿಸಲು ಸಿದ್ದರಾಮಯ್ಯನವರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಮೈತ್ರಿ ಧರ್ಮ ಪರಿಪಾಲನೆ ನಿಟ್ಟಿನಲ್ಲಿ ತಾವು ಸಹಕಾರ ನೀಡಬೇಕಾದ ಅನಿವಾರ್ಯತೆ ಇದೀಗ ಸಿದ್ದರಾಮಯ್ಯನವರಿಗೆ ಸಹ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT