ಅನಿತಾ ಕುಮಾರಸ್ವಾಮಿ, ಸಿದ್ದರಾಮಯ್ಯ 
ಕರ್ನಾಟಕ

ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅನಿತಾ ಕುಮಾರಸ್ವಾಮಿ; ಮಗನ ಗೆಲುವಿಗೆ ಸಹಕಾರ ಕೋರಿಕೆ?

ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ...

ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ.
 ಮಂಡ್ಯ ಚುನಾವಣಾ ಅಖಾಡಕ್ಕಿಳಿದಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯವನ್ನು ಹೇಗಾದರೂ ಮಾಡಿ ಗೆಲ್ಲಿಸಲು ಹಿಂದುಳಿದ ದಲಿತ ಹಾಗೂ ಅಲ್ಪ ಸಂಖ್ಯಾತ ಮತಗಳನ್ನ ಸೆಳೆಯಲು ಸಿದ್ದರಾಮಯ್ಯ ನೆರವು ಕೋರಲು ಅನಿತಾ ಕುಮಾರಸ್ವಾಮಿ ಸಿದ್ದರಾಮಯ್ಯ ಬಳಿಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ.
 ನಿಖಿಲ್ ಕುಮಾರಸ್ವಾಮಿ ನಾಳೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದು ಈ ಸಂದರ್ಭದಲ್ಲಿ ಮಂಡ್ಯಕ್ಕೆ ಬರುವಂತೆ ಅನಿತಾ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯದಲ್ಲಿ ಈಗಾಗಲೇ ಹಲವು ಕಾಂಗ್ರೆಸ್ ಮುಖಂಡರು ಸುಮಲತಾಗೆ ಬೆಂಬಲ ನೀಡುವುದಾಗಿ ಹೇಳುತ್ತಿದ್ದು ಇದರಿಂದ ತಮ್ಮ ಮಗನ ಗೆಲುವಿಗೆ ಭಾರೀ ಹೊಡೆತ ಬೀಳಬಹುದು ಎಂದು ಅರಿತಿರುವ ಹೆಚ್ ಡಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅದನ್ನು ಸರಿಪಡಿಸಲು ಸಿದ್ದರಾಮಯ್ಯನವರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಮೈತ್ರಿ ಧರ್ಮ ಪರಿಪಾಲನೆ ನಿಟ್ಟಿನಲ್ಲಿ ತಾವು ಸಹಕಾರ ನೀಡಬೇಕಾದ ಅನಿವಾರ್ಯತೆ ಇದೀಗ ಸಿದ್ದರಾಮಯ್ಯನವರಿಗೆ ಸಹ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT