ಸಾಂದರ್ಭಿಕ ಚಿತ್ರ 
ಕರ್ನಾಟಕ

ಅಭ್ಯರ್ಥಿಗಳೇ ಆಸ್ತಿ ಘೋಷಣೆ ಮಾಡುವಾಗ ಹುಷಾರ್: ಹದ್ದಿನ ಕಣ್ಣಿಟ್ಟಿದೆ ಐಟಿ ಇಲಾಖೆ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕೀಯ ಅಭ್ಯರ್ಥಿಗಳು ತಮ್ಮ ಆಸ್ತಿಗಳ ಘೋಷಣೆ ಮಾಡುವ...

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕೀಯ ಅಭ್ಯರ್ಥಿಗಳು ತಮ್ಮ ಆಸ್ತಿಗಳ ಘೋಷಣೆ ಮಾಡುವ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ ಅಫಿಡವಿಟ್ಟಿನ ಬಗ್ಗೆ ಆದಾಯ ತೆರಿಗೆ ಇಲಾಖೆ ಸೂಕ್ಷ್ಮವಾಗಿ ಗಮನಿಸಲಿದೆ. ಅಲ್ಲದೆ ಆದಾಯ ತೆರಿಗೆ ಸಲ್ಲಿಕೆಯ ದಾಖಲೆಗಳ ಜೊತೆ ಪರಿಶೀಲಿಸಲಿದೆ.
ಕರ್ನಾಟಕ ಮತ್ತು ಗೋವಾ ಪ್ರಾಂತ್ಯದ ಆದಾಯ ತೆರಿಗೆ ಇಲಾಖೆಯ ಪ್ರಧಾನ ಮುಖ್ಯ ಚುನಾವಣಾಧಿಕಾರಿ ಬಿ ಆರ್ ಬಾಲಕೃಷ್ಣ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಇಲಾಖೆ ತನ್ನದೇ ಆದ ಗುಪ್ತಚರ ಸಿಬ್ಬಂದಿ ಮೂಲಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಏನಾದರೂ ನಗದು ಮತ್ತು ವಸ್ತುಗಳ ಚಲನವಲನವಾಗುತ್ತದೆಯೇ ಎಂದು ಗಮನಿಸಲಿದ್ದಾರೆ ಎಂದು ಹೇಳಿದರು.
ಇಲ್ಲಿಯವರೆಗೆ ರಾಜ್ಯದಲ್ಲಿ ಮೂರು ಶೋಧ ಕಾರ್ಯಗಳನ್ನು ನಡೆಸಲಾಗಿದ್ದು 2.37 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ಒಂದು ನಮ್ಮದೇ ಗುಪ್ತಚರ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಾಗಿದ್ದು 1.67 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT