ನಿಖಿಲ್ ಕುಮಾರಸ್ವಾಮಿ 
ಕರ್ನಾಟಕ

ಮಂಡ್ಯ: ಭರ್ಜರಿ ರೋಡ್ ಶೋ ಮೂಲಕ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಬೃಹತ್ ಶಕ್ತಿ ಪ್ರದರ್ಶನ ತೋರುವ ಮೂಲಕ ನಾಮಪತ್ರ ಸಲ್ಲಿಸಿದರು.

ಮಂಡ್ಯ: ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ  ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು  ಬೃಹತ್ ಶಕ್ತಿ ಪ್ರದರ್ಶನ ತೋರುವ ಮೂಲಕ ನಾಮಪತ್ರ ಸಲ್ಲಿಸಿದರು.

ತೆರೆದ ವಾಹನದಲ್ಲಿ ಜಿಲ್ಲಾಧಿಕಾರಿ ಕಚೇರಿಯವರೆಗೂ ಭರ್ಜರಿ ರೋಡ್  ಶೋ ನಡೆಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.ಸಚಿವರಾದ ಡಿಕೆ ಶಿವಕುಮಾರ್, ಎಚ್ ಡಿ ರೇವಣ್ಣ, ಸಿ.ಎಸ್. ಪುಟ್ಟರಾಜ್, ಅನಿತಾ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ತೆರೆದ ವಾಹನದಲ್ಲಿಯೇ ಜನತೆಯನ್ನುದ್ದೇಶಿಸಿ ಮಾತನಾಡಿದ ಇಂಧನ ಸಚಿವ ಡಿ. ಕೆ. ಶಿವಕುಮಾರ್,  ಜಾತ್ಯತೀತಾ ಸರ್ಕಾರವನ್ನು ರಚಿಸಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಬೇಷರತ್ತು ಬೆಂಬಲ ನೀಡುವ ಮೂಲಕ  ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಲಾಗಿದೆ. ಕೊಟ್ಟ ಮಾತನ್ನು ವಾಪಾಸ್ ಪಡೆದುಕೊಳ್ಳುವ  ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಲೋಕಸಭಾ ಉಪ ಚುನಾವಣೆಯಲ್ಲಿ ಶಿವಮೊಗ್ಗ ಬಿಟ್ಟು ಉಳಿದ ಕಡೆಗಳಲ್ಲಿ ಪ್ರಚಾರ ನಡೆಸುವ ಮೂಲಕ ಮೈತ್ರಿ ಅಭ್ಯರ್ಥಿಗಳನ್ನು  ಗೆಲ್ಲಿಸಿಕೊಳ್ಳಲಾಗಿದೆ.  ಮೈತ್ರಿ ಧರ್ಮ ಪಾಲನೆ ಹಿನ್ನೆಲೆಯಲ್ಲಿ ಸುಮಲತಾ ಅವರಿಗೆ ಮೈಸೂರು, ಬೆಂಗಳೂರು ದಕ್ಷಿಣದಲ್ಲಿ ಸೀಟು ಕೊಡಲು ತೀರ್ಮಾನಿಸಲಾಗಿತ್ತು. ಆದರೆ, ಅವರು ಒಪ್ಪಿಕೊಳ್ಳಲಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ,  ಜಿಲ್ಲೆಯ ಅಭಿವೃದ್ಧಿಗಾಗಿ  ಬಜೆಟ್ ನಲ್ಲಿ 8 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಮಂಡ್ಯ ಬಜೆಟ್ ಎಂದು ಟೀಕಿಸುತ್ತಿದ್ದ ಬಿಜೆಪಿಯವರು ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಪರ ಮಾಡುವ ನೈತಿಕ ಹಕ್ಕಿಲ್ಲ ಎಂದರು. ತಮ್ಮ ಮೇಲಿನ ಅಧಿಕಾರ ದುರುಪಯೋಗ ಆರೋಪ ಸತ್ಯಕ್ಕೆ ನಿರಾಧಾರವಾದದ್ದು ಎಂದು ಹೇಳಿದರು.
ನಿಖಿಲ್ ಕುಮಾರಸ್ವಾಮಿ ಮಾತನಾಡಿ,ಜಿಲ್ಲೆಯ ಅಭಿವೃದ್ಧಿಗಾಗಿ ತನ್ನ ಜೀವನವನ್ನು ಮುಡುಪಾಗಿಡುವುದಾಗಿ ಘೋಷಿಸಿದರು.ಕುಮಾರಸ್ವಾಮಿ, ದೇವೇಗೌಡರು ರಾಜಕೀಯದಲ್ಲಿ ಬೆಳೆಯಲು ಕಾರಣವಾಗಿರುವ ಮಂಡ್ಯ ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT