ಸುಮಲತಾ ಅಂಭರೀಷ್, ಯಶ್, ದರ್ಶನ್ 
ಕರ್ನಾಟಕ

ಸುಮಲತಾ, ದರ್ಶನ್, ಯಶ್ ಗೆ ಸಿಆರ್ ಪಿಎಫ್ ಭದ್ರತೆ ಕೋರಿ ಕೇಂದ್ರಕ್ಕೆ ಬಿಜೆಪಿ ಪತ್ರ

ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಅವರ ಬೆಂಬಲಕ್ಕೆ....

ಬೆಂಗಳೂರು: ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಅವರ ಬೆಂಬಲಕ್ಕೆ ನಿಂತಿರುವ ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡಬೇಕು ಎಂದು ರಾಜ್ಯ ಬಿಜೆಪಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಅವರು . ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದು, ತಮ್ಮ ಮನೆ ಬಳಿ ಗುಪ್ತಚರ ಇಲಾಖೆ ಪೊಲೀಸ್ ಅಧಿಕಾರಿಗಳನ್ನು ಬಿಡಲಾಗಿದೆ. ನಮಗೆ ಭದ್ರತೆ ಬಗ್ಗೆ ಆತಂಕ ಎದುರಾಗಿದೆ. ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರಿದ್ದರು.
ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಗೆ ಬಿಜೆಪಿ ಬೆಂಬಲ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಅವರು, ಸುಮಲತಾ, ಅವರ ಪುತ್ರ ಅಭಿಷೇಕ್, ದರ್ಶನ್ ಹಾಗೂ ಯಶ್ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ವಿರುದ್ಧ ಸ್ಪರ್ಧಿಸಿರುವ ಸುಮಲತಾ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್ ಗೂಂಡಾಗಳು ದರ್ಶನ್ ಅವರ ಮನೆ ಮೇಲೆ ದಾಳಿ ಮಾಡಿದ್ದರು ಎಂದು ಅರವಿಂದ್ ಲಿಂಬಾವಳಿ ಅವರು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT