ಸಾಂದರ್ಭಿಕ ಚಿತ್ರ 
ಕರ್ನಾಟಕ

ಮತದಾನದಲ್ಲಿ ನೋಟಾ ಬಟನ್ ಒತ್ತಿ: ಬೋವಿ ಜನಾಂಗದವರಿಗೆ ಸಿದ್ದರಾಮೇಶ್ವರ ಶ್ರೀಗಳ ಕರೆ

ರಾಷ್ಟ್ರಮಟ್ಟದಲ್ಲಿ ರಾಜಕೀಯ ಪಕ್ಷಗಳ ಗಮನ ಸೆಳೆಯಲು ಚಿತ್ರದುರ್ಗದ ಬೋವಿ ಗುರುಪೀಠ ಈ ಬಾರಿಯ ...

ಚಿತ್ರದುರ್ಗ: ರಾಷ್ಟ್ರಮಟ್ಟದಲ್ಲಿ ರಾಜಕೀಯ ಪಕ್ಷಗಳ ಗಮನ ಸೆಳೆಯಲು ಚಿತ್ರದುರ್ಗದ ಬೋವಿ ಗುರುಪೀಠ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗೆ ಮತ ಹಾಕದೆ ನೋಟಾ ಆಯ್ಕೆಯನ್ನು ಚಲಾಯಿಸುವುದಾಗಿ ನಿರ್ಧರಿಸಿದೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಬೋವಿ ಗುರುಪೀಠದ ಸ್ವಾಮೀಜಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ, ಚಿತ್ರದುರ್ಗದಲ್ಲಿ ಸುಮಾರು 2 ಲಕ್ಷ ಬೋವಿ ಜನಾಂಗದ ಮತದಾರರಿದ್ದರೂ ಕೂಡ ಈ ಸಮಾಜ ಹಲವು ವರ್ಷಗಳಿಂದ ತುಳಿತಕ್ಕೊಳಗಾಗಿದ್ದು ಸೌಲಭ್ಯವಂಚಿತವಾಗಿದೆ. ಚಿತ್ರದುರ್ಗ ಪರಿಶಿಷ್ಟ ಜಾತಿ ಕ್ಷೇತ್ರದಿಂದ ಬೋವಿ ಜನಾಂಗದ ಒಬ್ಬರಿಗೆ ಕೂಡ ಚುನಾವಣೆಯಲ್ಲಿ ನಿಲ್ಲುವ ಅವಕಾಶ ಸಿಕ್ಕಿಲ್ಲ. ಯಾವುದೇ ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ಗಮನ ಹರಿಸಿಲ್ಲ. ಹೀಗಾಗಿ ಚಿತ್ರದುರ್ಗ ಸೇರಿದಂತೆ ರಾಜ್ಯಾದ್ಯಂತ ಇರುವ ಬೋವಿ ಜನಾಂಗದವರಿಗೆ ಈ ಚುನಾವಣೆಯಲ್ಲಿ ಮತ ಚಲಾಯಿಸದಂತೆ ನಿರ್ದೇಶನ ನೀಡಲು ಮಠ ನಿರ್ಧರಿಸಿದೆ ಎಂದು ಹೇಳಿದರು.
ಚಿತ್ರದುರ್ಗದಲ್ಲಿ ಬೋವಿ ಜನಾಂಗದವರು ಚುನಾವಣೆಗೆ ನಿಂತರೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಕಾಂಗ್ರೆಸ್ಸಾಗಲಿ, ಬಿಜೆಪಿಯಾಗಲಿ ಈ ನಿಟ್ಟಿನಲ್ಲಿ ಯೋಚಿಸಿಲ್ಲ. ಹೀಗಾಗಿ ರಾಜಕೀಯ ಪಕ್ಷಗಳಿಗೆ ಪಾಠ ಕಲಿಸಲು ಈ ಬಾರಿ ಬೋವಿ ಜನಾಂಗದವರು ಮತ ಹಾಕದಂತೆ ಹೇಳುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.
ನಾಡಿದ್ದು 30 ಅಥವಾ ಏಪ್ರಿಲ್ 1ರಂದು ನಡೆಯಲಿರುವ ಬೋವಿ ಜನಾಂಗದ ಸಮಾವೇಶದಲ್ಲಿ ಇದನ್ನು ಜನರ ಮುಂದೆ ಪ್ರಸ್ತಾಪಿಸಲಾಗುವುದು. ಈ ಹಿಂದೆ ಬೋವಿ ಜನಾಂಗದವರು ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡಿ ಎಂ ಚಂದ್ರಪ್ಪ ಮತ್ತು ಗೂಳಿಹಟ್ಟಿ ಡಿ ಶೇಖರ್ ಅವರ ಗೆಲುವಿಗೆ ಕಾರಣರಾಗಿದ್ದರು. ಆದರೆ ಈ ಬಾರಿ ಬಿಜೆಪಿ ಭರವಸೆ ನೀಡಿದ್ದರೂ ಕೂಡ ಜನಾರ್ದನ ಸ್ವಾಮಿ, ಮಾನಪ್ಪ ವಿಜ್ಜಲ್ ಮತ್ತು ಸೋಮಶೇಖರ್ ಅವರ ಹೆಸರುಗಳನ್ನು ಪರಿಗಣಿಸದೆ ಮಾದಿಗ ಸಮುದಾಯದ ಆನೆಕಲ್ ನಾರಾಯಣಸ್ವಾಮಿ ಅವರನ್ನು ನಿಲ್ಲಿಸಿದೆ. ಇದು ಬೋವಿ ಜನಾಂಗದ ಅಸಮಾಧಾನಕ್ಕೆ ಕಾರಣವಾಗಿದ್ದು ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳಿಗೆ ಮತ ಹಾಕದಿರಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT