ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದ ಸುಮಲತಾ ಅಂಬರೀಷ್ 
ಕರ್ನಾಟಕ

ಮೂರಲ್ಲ, ಸುಮಲತಾ ಹೆಸರಿನ ನೂರು ಅಭ್ಯರ್ಥಿಗಳು ಬೇಕಾದರೆ ನಿಲ್ಲಲಿ: ಸುಮಲತಾ ಅಂಬರೀಷ್

ಸುಮಲತಾ ಹೆಸರಿನಲ್ಲಿ ಮೂರಲ್ಲ, ನೂರು ಜನ ಅಭ್ಯರ್ಥಿಗಳು ಸಿಕ್ಕಿದರೂ ಜಿಲ್ಲೆಯ ಬುದ್ಧಿವಂತ ಮತದಾರರು ...

ಮಂಡ್ಯ: ಸುಮಲತಾ ಹೆಸರಿನಲ್ಲಿ ಮೂರಲ್ಲ, ನೂರು ಜನ ಅಭ್ಯರ್ಥಿಗಳು ಸಿಕ್ಕಿದರೂ ಜಿಲ್ಲೆಯ ಬುದ್ಧಿವಂತ ಮತದಾರರು ತಮಗೆ ಇಚ್ಛೆಯುಳ್ಳವರಿಗೆ ಮತ ಹಾಕುತ್ತಾರೆ. ಕೆಲವರ ಕುತಂತ್ರ ರಾಜಕಾರಣಕ್ಕೆ ಜನರು ಏಪ್ರಿಲ್ 18ರಂದು ಉತ್ತರ ಕೊಡುತ್ತಾರೆ ಎಂದು ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ ಸಿಎಂ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಅವರು ನಿನ್ನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಮತದಾರರಲ್ಲಿ ಗೊಂದಲ ಸೃಷ್ಟಿಸಿ ನನಗೆ ಮತ ಕಡಿಮೆ ಬೀಳುವಂತೆ ಮಾಡಲು ನನ್ನದೇ ಹೆಸರಿನ ಮೂವರು ಮಹಿಳೆಯರನ್ನು ಹುಡುಕಿಕೊಂಡು ಬಂದು ಅವರ ಕೈಯಿಂದ ನಾಮಪತ್ರ ಹಾಕಿಸಿದ್ದಾರೆ. ಆದರೆ ಜಿಲ್ಲೆಯ ಜನರು ಮುಠ್ಠಾಳರಲ್ಲ, ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಕುತಂತ್ರ ರಾಜಕಾರಣ ಮಾಡಿ ಎಲ್ಲವನ್ನೂ ಗೆಲ್ಲಲು ಸಾಧ್ಯವಿಲ್ಲ. ಬೇಕಿದ್ದರೆ ಅವರ ಅಭ್ಯರ್ಥಿಯ ಹೆಸರನ್ನು ಕೂಡ ಸುಮಲತಾ ಎಂದೇ ಬದಲಾಯಿಸಿಕೊಳ್ಳಲಿ ಎಂದು ಸುಮಲತಾ ಸವಾಲು ಹಾಕಿದರು.
ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ರಾಜಕೀಯ ನಾಯಕರು ಏನೇನು ಮಾಡುತ್ತಿದ್ದರು ಎಂದು ಈ ರಾಜ್ಯದ ಜನತೆ ನೋಡಿದ್ದಾರೆ. ಸಿಎಂ ಕುಮಾರಸ್ವಾಮಿ ಮತ್ತು ಡಿ ಕೆ ಶಿವಕುಮಾರ್ ಹಾವು ಮುಂಗುಸಿಗಳಂತೆ ಕಿತ್ತಾಡುತ್ತಿದ್ದರು. ಈಗ ಪರಿಸ್ಥಿತಿಯ ಲಾಭ ಪಡೆಯಲು ನಾವು ನಿಜವಾದ ಜೋಡೆತ್ತುಗಳು ಅನ್ನುತ್ತಿದ್ದಾರೆ. ನನ್ನ ಬೆಂಬಲಕ್ಕೆ ನಿಂತಿರುವ ಮಕ್ಕಳ ಸಮಾನರಾದ ಯಶ್, ದರ್ಶನ್ ಅವರಿಗೆ ತಾವು ಯಾರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂಬ ಅರಿವಿದೆ. ಯಾರು ಎಷ್ಟೇ ಬೆದರಿಕೆ ಹಾಕಿದರೂ ಕೂಡ ಅವರು ನನ್ನೊಂದಿಗಿರುತ್ತಾರೆ. ನಾನು ಹೋದ ಕಡೆ ಪ್ರಚಾರ ಸಭೆಗಳಲ್ಲಿ ಜನರನ್ನು ದುಡ್ಡು ಕೊಟ್ಟು ಕರೆಸಿಕೊಂಡಿಲ್ಲ, ಜನರೇ ಪ್ರೀತಿಯಿಂದ, ಅಂಬರೀಷ್ ಮೇಲಿನ ಅಭಿಮಾನದಿಂದ ಬರುತ್ತಾರೆ. ನನ್ನ ಹೋರಾಟಕ್ಕೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT