ಕುಂದಗೋಳದಲ್ಲಿ ಕಾಂಗ್ರೆಸ್ ನಾಯಕರ ಪ್ರಚಾರ 
ಕರ್ನಾಟಕ

'ಕೈ-ಕಮಲ' ಪಾಳಯದಲ್ಲಿ ಅಸಮಾಧಾನ ಬೇಗುದಿ: ತಣ್ಣಗಾಗುತ್ತಿಲ್ಲ ಬಂಡಾಯದ ಕುದಿ

ಕಾಂಗ್ರೆಸ್ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಆದರೆ ಕಾಂಗ್ರೆಸ್ ಗೆ ...

ಬೆಂಗಳೂರು: ಕಾಂಗ್ರೆಸ್ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಆದರೆ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿಯಲ್ಲೂ ಅಸಮಾಧಾನ ಕುದಿಯುತ್ತಿದೆ.
ಕುಂದಗೋಳದಲ್ಲಿ ಮಾಜಿ ಶಾಸಕ ಗೋವಿಂದಪ್ಪ ಜುಟ್ಟಾಳ್ ಪುತ್ರ ಚಂದ್ರಶೇಖರ್ ಜುಟ್ಟಾಳ್ ಸೇರಿದಂತೆ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ,ತಾವು ಕೂಡ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. 
ಅವರೆಲ್ಲಾ ಪ್ರಬಲ ಅಭ್ಯರ್ಥಿಗಳಲ್ಲಾ, ಆದರೂ ಮತಗಳು ವಿಭಜನೆಯಾಗುವ ಭಯ ಕಾಂಗ್ರೆಸ್ ಗೆ ಕಾಡುತ್ತಿದೆ, ಕಳೆದ ಬಾರಿ 600 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು, ಹೀಗಾಗಿ ಚಾನ್ಸ್ ತೆಗೆದುಕೊಳ್ಳಲು ಕಾಂಗ್ರೆಸ್ ತಯಾರಿಲ್ಲ, ಹೀಗಾಗಿ ಜಿಲ್ಲಾ ಮತ್ತು ರಾಜ್ಯ ನಾಯಕರು ಅಸಮಾಧಾನ ಸರಿಪಡಿಸಲು ಇನ್ನಿಲ್ಲದ ಹರಸಾಹಸ ಮಾಡುತ್ತಿದ್ದಾರೆ. ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮನವೊಲಿಸಲು ಮುಂದಾಗಿದ್ದಾರೆ.
ಇನ್ನೂ ಚಿಂಚೋಳಿಯಲ್ಲೂ ಕಾಂಗ್ರೆಸ್ ಗೆ ಇದೇ ಪರಿಸ್ಥಿತಿ ಎದುರಾಗಿದೆ. ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಪದಾಧಿಕಾರಿ ಶಿವಕುಮಾರ್ ಕೆ, ಕೊಲ್ಲೂರು ಮತ್ತು ಜೆಡಿಎಸ್ ಮುಖಂಡ ಬಸವರಾಜ್ ಮಲ್ಲಯ್ಯ  ಕೂಡ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದ್ದಾರೆ, ಆದರೆ ಅವರಿಬ್ಬರನ್ನು ಮನವೊಲಿಸಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.
ಇನ್ನೂ ಬಿಜೆಪಿ ಪರಿಸ್ಥಿತಿ ಕೂಡ ಇದಕ್ಕಿಂತ ಭಿನ್ನವಾಗಿಲ್ಲ, ಕುಂದಗೋಳ ಮತ್ತು ಚಿಂಚೋಳಿಯಲ್ಲಿ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಚಿವ ಸುನೀಲ್ ವಲ್ಯಾಪುರೆ ಟಿಕೆಟ್ ಆಕಾಂಕ್ಷಿಯಾಗಿದ್ದರು, ಎಂ.ಆರ್ ಪಾಟೀಲ್ ಟಿಕೆಟ್ ಸಿಗಲಿಲ್ಲವೆಂದು ಅಸಮಾಧಾನ ಗೊಂಡಿದ್ದಾರೆ.ಆದರೆ ತಮಗೆ ಟಿಕೆಟ್ ನೀಡಲು ತಮ್ಮನ್ನು ಪರಿಗಣಿಸಲಿಲ್ಲ ಎಂದು ಬೇಸರಗೊಂಡಿದ್ದಾರೆ, ಆದರೆ ಪಕ್ಷದ ನಿರ್ಧಾರಕ್ಕೆ ತಾವು ಬದ್ಧರಾಗಿದ್ದು,  ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಒಗ್ಗಟ್ಟಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT