ಸುಭಾಷ್ ರಾಥೋಡ್ 
ಕರ್ನಾಟಕ

ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಗೆ 4 ಕಡೆ ವೋಟರ್ ಐಡಿ: ಬಿಜೆಪಿಯಿಂದ ದೂರು ದಾಖಲು

ಚಿಂಚೋಳಿ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿಲು ಕೊನೆಯ ದಿನಾಂಕ ಮುಗಿದಿದೆ, ನಾಲ್ಕು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ...

ಬೆಂಗಳೂರು: ಚಿಂಚೋಳಿ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿಲು ಕೊನೆಯ ದಿನಾಂಕ ಮುಗಿದಿದೆ, ನಾಲ್ಕು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಅವರ ನಾಮಪತ್ರವನ್ನು ರದ್ದುಪಡಿಸುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್‍ಗೆ ದಾಖಲೆಗಳ ಸಮೇತ ದೂರು ಸಲ್ಲಿಸಿರುವ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ, ಸಂಚಾಲಕ ದತ್ತಗುರು ಹೆಗಡೆ, ಸಹ ವಕ್ತಾರರಾದ ಎಸ್.ಪ್ರಕಾಶ್, ಎ.ಎಚ್.ಆನಂದ್, ಮುಖಂಡ ಛಲವಾದಿ ನಾರಾಯಣಸ್ವಾಮಿ ಅವರುಗಳು, ಕೂಡಲೇ ಸುಭಾಷ್ ರಾಥೋಡ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಒತ್ತಾಯಿಸಿದ್ದಾರೆ.
ಸುಭಾಷ್ ರಾಥೋಡ್ ಗುಲ್ಬರ್ಗ ಜಿಲ್ಲೆಯ ಆಳಂದ, ಕಲಬುರಗಿ ದಕ್ಷಿಣ, ಕಲಬುರಗಿಯ ಚಿಂಚೋಳಿ ಹಾಗೂ ಗುಲ್ಬರ್ಗ ದಕ್ಷಿಣದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಸುಭಾಷ್ ರಾಥೋಡ್ ನಾಲ್ಕು ಕಡೆ ಮತಪಟ್ಟಿಯಲ್ಲಿ ಹೆಸರು ಹೊಂದಿರುವುದರ ಜೊತೆಗೆ ಅಷ್ಟೇ ಸಂಖ್ಯೆಯ ಗುರುತಿನ ಚೀಟಿ ಹೊಂದಿದ್ದಾರೆ.
ನಾನು ನಾಲ್ಕು ಕಡೆ ಗುರುತಿನ ಚೀಟಿ ಹೊಂದಿರುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ, ಏಕೆಂದರೇ ಈ ವಿಷಯ ಕಲಬುರಗಿ ಆಯುಕ್ತ ಮತ್ತು ಉಪ ಆಯುಕ್ತರಿಗೆ ಈ ವಿಷಯ ತಿಳಿದಿದೆ, ಗುರುತಿನ ಚೀಟಿ ರದ್ದು ಪಡಿಸುವಂತೆ ನೀಡಿರುವ ಪತ್ರ ಕೂಡ ನನ್ನ ಬಳಿಯೇ ಇದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT