ಕುಸುಮಾವತಿ ಶಿವಳ್ಳಿ 
ಕರ್ನಾಟಕ

ಕುಂದಗೋಳದಲ್ಲಿ ಜೆಡಿಎಸ್ -ಕಾಂಗ್ರೆಸ್ ಗೆ ಅನುಕಂಪದ ಅಲೆಯೇ ವೋಟ್ ಬ್ಯಾಂಕ್!

ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷವೂ ಇದುವರೆಗೂ ಪ್ರಬಲವಾಗಿ ಬೇರೂರಿಲ್ಲ, ಹಲವು ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಇಲ್ಲಿ ತಮ್ಮ ಅದೃಷ್ಟ ...

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷವೂ ಇದುವರೆಗೂ ಪ್ರಬಲವಾಗಿ ಬೇರೂರಿಲ್ಲ, ಹಲವು ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಇಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿದ್ದಾರೆ.ಇತ್ತೀಚೆಗೆ ಸಚಿವ ಸಿ.ಎಸ್ ಶಿವಳ್ಳಿ ನಿಧನರಾದ ನಂತರ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಗೆ ಅನುಕಂಪದ ಅಲೆ ಪ್ರಮುಖವಾಗಿ ಕೆಲಸ ಮಾಡುತ್ತಿದೆ.
1957 ಮತ್ತು 1962 ರಲ್ಲಿ ನಡೆದ ಎರಡು ಚುನಾವಣೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಟಿ,ಕೆ ಕಂಬಳ್ಳಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು,  ಎಸ್ ಆರ್ ಬೊಮ್ಮಾಯಿ ಎರಡನೇ ಬಾರಿಗೆ ಜಯ ಗಳಿಸಿದ್ದರು.
ನಂತರ ಬೊಮ್ಮಾಯಿ ಕುಂದಗೋಳದಿಂದ ಸ್ಪರ್ಧಿಸುವುದನ್ನು ನಿಲ್ಲಿಸಿ  ಹುಬ್ಬಳ್ಳಿ ಗ್ರಾಮೀಣ ಬಾಗಕ್ಕೆ ಶಿಫ್ಟ್ ಆದರು. ನಂತರ 1988 ರಲ್ಲಿ ಸಿಎಂ ಆದರು. 1985 ರಲ್ಲಿ  ಜನತಾ ಪಾರ್ಟಿ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ನಂತರ ನಡೆದ ಚುನಾವಣೆಯಲ್ಲಿ ಗೋವಿಂದಪ್ಪ ಜುಟ್ಟಾಳ್ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ್ದರು. ಅದಾದ ನಂತರ ಶಿವಳ್ಳಿ ಅವರನ್ನು ಸೋಲಿಸುವ ಮೂಲಕ ಜನತಾ ದಳದ ಮಲ್ಲಿಕಾರ್ಜುನ ಅಕ್ಕಿ ಗೆಲುವು ಸಾಧಿಸಿದ್ದರು.
ಅದಾದ ನಂತರ ಶಿವಳ್ಳಿ ಪಕ್ಷೇತರ ಅಭ್ಯರ್ಥಯಾಗಿ ಸ್ಪರ್ಧಿಸಿ ಜೆಡಿಯು ಮಲ್ಲಿಕಾರ್ಜುನ ಅಕ್ಕಿ ಅವರನ್ನು ಸೋಲಿಸಿದ್ದರು, 2008ರ ಚುನಾವಣೆ ಕ್ಷೇತ್ರದ ಚಿತ್ರಣವನ್ನೇ ಬದಲಿಸಿತು. ಬಿಜೆಪಿಯ ಎಸ್ ಐ ಚಿಕ್ಕಣ್ಣಗೌಡರ್ ಕಲಘಟಕಿಯಿಂದ ಸ್ಪರ್ಧಿಸಿದ್ದರು. ಅದಾದ ನಂತರ ಸತತವಾಗಿ ಶಿವಳ್ಳಿ ಎರಡು ಬಾರಿ ಗೆಲುವು ಸಾಧಿಸಿದ್ದರು,
ಶಿವಳ್ಳಿ ಅವರ ನಿಧನದ ನಂತರ ತೆರವಾಗಿರುವ ಕುಂದಗೋಳ ವಿಧಾನಸಭೆ ಉಪ ಚುನಾವಣೆ ನಡೆಯುತ್ತಿದ್ದು, ಅವರ ಪತ್ನಿ ಶಿವಳ್ಳಿ ಕಣಕ್ಕಿಳಿದಿದ್ದಾರೆ, ಕಾಂಗ್ರೆಸ್ ಮತ್ತೆ ತನ್ನ ಸೀಟು ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದು, ಅನುಕಂಪದ ಅಲೆ ಮೇಲೆ ಮತ ಯಾಚಿಸುತ್ತಿದೆ. ಬಿಜೆಪಿ ಕೂಡ ತನ್ನ ಶಕ್ತಿ ಪ್ರದರ್ಶನಕ್ಕೆ ಸಿದ್ಧವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT