ಎಚ್‍.ಡಿ.ಕುಮಾರಸ್ವಾಮಿ 
ಕರ್ನಾಟಕ

ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಂಬಿಸಲು ಬಿಜೆಪಿಯಿಂದ ಎಕ್ಸಿಟ್ ಪೋಲ್ ಬಳಕೆ: ಕುಮಾರಸ್ವಾಮಿ

ದೇಶದಲ್ಲಿ ಮೋದಿ ಅಲೆ ಇದೆ ಎಂಬ ಭಾವನೆ ಮೂಡಿಸಲು ಬಿಜೆಪಿ ಚುನಾವಣೋತ್ತರ ಸಮೀಕ್ಷೆಯನ್ನು ಬಳಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು, ದೇಶದಲ್ಲಿ ಮೋದಿ ಅಲೆ ಇದೆ ಎಂಬ ಭಾವನೆ ಮೂಡಿಸಲು ಬಿಜೆಪಿ ಚುನಾವಣೋತ್ತರ ಸಮೀಕ್ಷೆಯನ್ನು ಬಳಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕೇಂದ್ರದಲ್ಲಿ ಮುಂದಿನ ಸರ್ಕಾರ ರಚಿಸಲು ಸೀಟು ಕೊರತೆಯಾದರೆ ಸಣ್ಣ ಪುಟ್ಟ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಲು ಈ ಸಮೀಕ್ಷೆಯ ಮೂಲಕ ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಕರ್ನಾಟಕದಲ್ಲಿ ಜೆಡಿಎಸ್‍ಗೆ ಹೆಚ್ಚಿನ ಸ್ಥಾನಗಳನ್ನು ನೀಡದ ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ, ಈ ಬಗ್ಗೆ ಟ್ವೀಟ್ ಮಾಡಿ, ಕೃತಕವಾಗಿ ವಿನ್ಯಾಸಗೊಳಿಸಿದ ಅಥವಾ ತಯಾರಿಸಿದ ಮೋದಿ ಅಲೆಗಳ ಮೂಲಕ  ಮೇ 23ರ ಫಲಿತಾಂಶದ ಬಳಿಕ ಸರ್ಕಾರ ರಚಿಸಲು ಸ್ಥಾನಗಳ ಕೊರತೆ ಉಂಟಾದಾಗ ಮುಂಚಿತವಾಗಿ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಅವರು ಸೋಮವಾರ ಮಾಡಿರುವ ಟ್ವೀಟ್ ವೈರಲ್ ಆಗಿದೆ.  ಇಡೀ ರಾಜಕೀಯ ವಿರೋಧ ಪಕ್ಷಗಳು ಪ್ರಧಾನಮಂತ್ರಿಯ ಅಧೀನದಲ್ಲಿ ಇವಿಎಂನ ವಿಶ್ವಾಸಾರ್ಹತೆಯ ಬಗ್ಗೆ ಕಳವಳ ವ್ಯಕ್ತಪಡಿಸಿವೆ ಎಂದು ಅವರು ಹೇಳಿದ್ದಾರೆ.
ಇವಿಎಂನಲ್ಲಿ ಅಕ್ರಮ ಸಾಧ್ಯತೆ ಇರುವುದರಿಂದ ಅದರ ಬದಲಾಗಿ ಸಾಂಪ್ರದಾಯಿಕ  ಮತಪತ್ರಗಳ ಮೂಲಕ ಚುನಾವಣೆ ನಡೆಸುವಂತೆ ವಿರೋಧ ಪಕ್ಷಗಳು ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಸಂದರ್ಭದಲ್ಲೇ ಕುಮಾರಸ್ವಾಮಿ ಈ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT