ಕರ್ನಾಟಕ

ಚಿಂಚೋಳಿ ವಿಧಾನಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಗೆ ಗೆಲುವು

Sumana Upadhyaya
ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಗೆಲುವು ಸಾಧಿಸಿದ್ದಾರೆ.
ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದಾಗಿ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿತ್ತು. ಬಿಜೆಪಿಯಿಂದ ಡಾ.ಅವಿನಾಶ್ ಜಾಧವ್, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಸುಭಾಷ್ ರಾಥೋಡ್ ಅವರು ಕಣದಲ್ಲಿದ್ದರು. ಮೇ 19ರಂದು ಚುನಾವಣೆ ನಡೆದಿತ್ತು. ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ ಮತ್ತು ಮೈತ್ರಿಕೂಟದ ನಡುವೆ ಪೈಪೋಟಿ ಎದುರಾಗಿತ್ತು.
ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಉಮೇಶ್ ಜಾಧವ್ ನಡುವಿನ ಪ್ರತಿಷ್ಠೆಯ ಕಣಣವಾಗಿತ್ತು. ಡಾ.ಉಮೇಶ್ ಜಾಧವ್ ಪುತ್ರ ಡಾ.ಅವಿನಾಶ್ ಜಾಧವ್ ಸೋಲಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಣ ತೊಟ್ಟಿದ್ದರು. ಆದರೆ ಅದು ಸಾಧ್ಯವಾಗಿಲ್ಲ.
SCROLL FOR NEXT