ಪ್ರಕಾಶ್ ರೈ 
ಕರ್ನಾಟಕ

ಸೋಲು ಖಚಿತವಾಗುತ್ತಿದ್ದಂತೆ ಮತಎಣಿಕೆ ಕೇಂದ್ರದಿಂದ ಕಾಲ್ಕಿತ್ತ ನಟ ಪ್ರಕಾಶ್ ರೈ!

ಬಿಜೆಪಿಯ ಸಾಂಪ್ರದಾಯಿಕ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ...

ಬೆಂಗಳೂರು: ಬಿಜೆಪಿಯ ಸಾಂಪ್ರದಾಯಿಕ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಬಿಜೆಪಿಯ ಪಿ,ಸಿ ಮೋಹನ್ ಮತ್ತು ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ವಿರುದ್ಧ ಕಣಕ್ಕಿಳಿದಿದ್ದ ಪ್ರಕಾಶ್ ರೈ ಇಂದು ತಮ್ಮ ಬೆಂಬಲಿಗರೊಂದಿಗೆ ಮತ ಎಣಿಕೆ ಸ್ಥಳದಲ್ಲಿ ಹಾಜರಿದ್ದರು.
ಕೆಲ ಸಮಯ ಮತ ಎಣಿಕೆ ಕೇಂದ್ರದಲ್ಲಿದ್ದ ಪ್ರಕಾಶ್ ರೈ ತಮ್ಮ ಸೋಲು ಖಚಿತವಾಗುತ್ತಿದ್ದಂತೆ, ನಗುತ್ತಾ ಅಲ್ಲಿಂದ ತಮ್ಮ ಬೆಂಬಲಿಗರೊಂದಿಗೆ ಅಲ್ಲಿಂದ ತೆರಳಿದ್ದಾರೆ. ಪ್ರಕಾಶ್ ರೈ ಮತ ಎಣಿಕೆ ಕಾರ್ಯದಿಂದ ಪೆಚ್ಚು ಮೊರೆ ಹಾಕಿಕೊಂಡು ಹೋಗುತ್ತಿರುವ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ವ್ಯಕ್ತಿಯೊಬ್ಬರು ಶೇರ್ ಮಾಡಿದ್ದಾರೆ. 
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಲಿ ಸಂಸದ ಪಿ.ಸಿ ಮೋಹನ್4.9 ಲಕ್ಷ ಮತಗಳಿಸಿದ್ದಾರೆ, ರಿಜ್ವಾನ್ ಅರ್ಷದ್ 4.7 ಲಕ್ಷ.  ಮತಗಳಿಸಿದ್ದಾರೆ, ಪ್ರಕಾಶ್ ರೈ ಕೇವಲ 28,980 ಮತಗಳಿಗೆ ತೃಪ್ತಿ ಪಟ್ಟುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT