ಚಾಮರಾಜನಗರ: ಅಂತಿಮ ಸುತ್ತಿನ ಮತ ಎಣಿಕೆ ವರೆಗೂ ರೋಚಕ ಹಣಾಹಣಿ ಏರ್ಪಟ್ಟಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಾಜಕೀಯದಲ್ಲಿ ಗುರು- ಶಿಷ್ಯರಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್ ಹಾಗೂ ಆರ್. ಧ್ರುವ ನಾರಾಯಣ್ ನಡುವಣ ಆರಂಭದಿಂದಲೂ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ವಿ. ಶ್ರೀನಿವಾಸ್ ಪ್ರಸಾದ್ ನಂತರ ಕೆಲ ಸುತ್ತುಗಳು ಹಿನ್ನೆಡೆ ಅನುಭವಿಸಿದರು. ಆದರೆ, ಕಡೆಯ 20 ನೇ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.