ಭವಾನಿ ರೇವಣ್ಣ 
ಕರ್ನಾಟಕ

ನಮ್ಮಿಂದಲೇ ನಿಮಗೆ ಹೀಗಾಯಿತು: ದೇವೇಗೌಡರ ಎದುರು ಭವಾನಿ ರೇವಣ್ಣ ಗಳಗಳ ಕಣ್ಣೀರು!

ನಮ್ಮಿಂದಲೇ ನಿಮಗೆ ಸೋಲಾಯಿತು, ನಮ್ಮನ್ನು ಕ್ಷಮಿಸಿಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮುಂದೆ ಸೊಸೆ ಭವಾನಿ ರೇವಣ್ಣ ಗಳಗಳನೆ ಅತ್ತಿರುವ ...

ಬೆಂಗಳೂರು: ನಮ್ಮಿಂದಲೇ ನಿಮಗೆ ಸೋಲಾಯಿತು, ನಮ್ಮನ್ನು ಕ್ಷಮಿಸಿಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮುಂದೆ ಸೊಸೆ ಭವಾನಿ ರೇವಣ್ಣ ಗಳಗಳನೆ ಅತ್ತಿರುವ ಪ್ರಸಂಗ ನಡೆದಿದೆ. 
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ಭವಾನಿ, ನಿಮ್ಮ ಸೋಲಿಗೆ ನಾವೇ ಕಾರಣವಾಗಿಬಿಟ್ಟೆವು, ನಮ್ಮಿಂದ ನಿಮಗೆ ಈ ಸ್ಥಿತಿ ಬಂದು ಎಂದು ಕಣ್ಣೀರುಗರೆದಿದ್ದಾರೆ. ಪ್ರಜ್ವಲ್ ರೇವಣ್ಣ ರಾಜಿನಾಮೆ ನೀಡುತ್ತಾರೆ, ನೀವು ಮತ್ತೆ ಹಾಸನದಿಂದ ಸ್ಪರ್ಧಿಸಿ, ಇಲ್ಲ ಎನ್ನಬೇಡಿ, ಎಂದು ಮನವಿ ಮಾಡಿರುವ ಭವಾನಿ,ಸೋಲು ಗೆಲುವು ಸಹಜ, ಅದಕ್ಕೆಲ್ಲಾ ಎದೆಗುಂದಬಾರದು ಎಂದು ಸಮಾಧಾನ ಹೇಳಿದ್ದಾರೆ,
ಹಾಸನದಲ್ಲಿ ಪ್ರಜ್ವಲ್ ಗೆದ್ದಿದ್ದರು ನಾವು ಸಂಭ್ರಮ ಪಟ್ಟಿಲ್ಲ. ದೇವೇಗೌಡರು ಸೋಲನ್ನು ಕಂಡಿರುವುದು ನಮಗೆ ನೋವಾಗಿದೆ. ಇದರಿಂದ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಗೆಲುವನ್ನು ಸಂಭ್ರಮಿಸಲು ಪ್ರಜ್ವಲ್ ಹಾಗೂ ಕಾರ್ಯಕರ್ತರು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ತುಮಕೂರಿನಲ್ಲಿ ಆದ ಸೋಲಿನಿಂದ ಎಲ್ಲರಿಗೂ ನೋವಾಗಿದೆ. ನಾವು ಯಾರೂ ಕೂಡ ಗೆಲುವನ್ನು ಆಚರಿಸಿಲ್ಲ ಎಂದು ಭವಾವಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT