ಅಭಿನಂದನಾ ಬ್ಯಾನರ್ 
ಕರ್ನಾಟಕ

ಜೆಡಿಎಸ್ ತ್ರಿಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ ಸುಮಲತಾ ಬೆಂಬಲಿಗರು!

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಗೆಲುವಿಗೆ ಕಾರಣರಾದ ಜೆಡಿಎಸ್ ಪಕ್ಷದ ತ್ರಿಮೂರ್ತಿಗಳಿಗೆ ಸುಮಲತಾ ಅಂಬರೀಷ್ ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.

ಮಂಡ್ಯ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಗೆಲುವಿಗೆ ಕಾರಣರಾದ ಜೆಡಿಎಸ್ ಪಕ್ಷದ ತ್ರಿಮೂರ್ತಿಗಳಿಗೆ ಸುಮಲತಾ ಅಂಬರೀಷ್ ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.

ಮಂಡ್ಯದ ನೂರು ಅಡಿ ರಸ್ತೆಯಲ್ಲಿ ಸುಮಲತಾ ಬೆಂಬಲಿಗರು ಬ್ಯಾನರ್ ಕಟ್ಟಿದ್ದಾರೆ. ಈ ಬ್ಯಾನರ್ ನಲ್ಲಿ ಸಾರಿಗೆ ಸಚಿವ ಡಿ. ಸಿ. ತಮ್ಮಣ್ಣ, ವಿಧಾನಪರಿಷತ್ ಸದಸ್ಯ ಕೆ. ಟಿ. ಶ್ರೀರಂಠೇಗೌಡ, ಹಾಗೂ ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡರ ಪೋಟೋ ಹಾಕಿದ್ದಾರೆ. ಅ ಪೋಟೋ ಕೆಳಗೆ ಸುಮಲತಾ ಅಂಬರೀಷ್ ಗೆಲುವಿಗೆ ಕಾರಣವಾದ ತ್ರಿಮೂರ್ತಿಗಳಿಗೆ ಅಭಿನಂದನೆಗಳು ಎಂದು ಬರೆಯುವ ಮೂಲಕ ವ್ಯಂಗ್ಯವಾಡಿದ್ದಾರೆ.

ಲೋಕಸಭಾ ಚುನಾವಣೆಗೆ ಮುನ್ನ ಮನೆಗೆ ಹೋದವರಿಗೆ ಸುಮಲತಾ ನೀರು, ಕಾಫಿಯನ್ನು ಕೊಡಲ್ಲ ಅಂತಾ ಡಿ. ಸಿ. ತಮ್ಮಣ್ಣ ಟೀಕೆ ಮಾಡಿದ್ದರು. ಇನ್ನೂ ಸುಮಲತಾ ಗೌಡ್ತಿ ಅಲ್ಲ ಎಂದು ಶ್ರೀಕಂಠೇಗೌಡ ಹೇಳಿಕೆ ನೀಡಿದ್ದರು. ಸುಮಲತಾ ಮಾಯಾಂಗನೆ, ಆಂಧ್ರ ನಾಯ್ಡು , ಸಿನಿಮಾದವರನ್ನು ನಂಬಬೇಡಿ ಎಂದು ಶಿವರಾಮೇಗೌಡ ವ್ಯಂಗ್ಯ ವಾಡಿದ್ದರು.

ಈ ಮೂವರ ಹೇಳಿಕೆಗಳಿಗೆ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಈ ಅವಹೇಳನಾಕಾರಿ ಹೇಳಿಕೆಗಳಿಗೆ ಸುಮಲತಾ ಅಂಬರೀಷ್ ಅವರ ಗೆಲುವಿಗೆ ಸಹಕಾರ ಆಯ್ತು ಎಂದು ಅಭಿನಂದನಾ ಬ್ಯಾನರ್ ಹಾಕುವ ಮೂಲಕ ಜೆಡಿಎಸ್ ನಾಯಕರ ಬಗ್ಗೆ ವ್ಯಂಗ್ಯಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT