ದೇಶ

ರಾಷ್ಟ್ರಪತಿಯಿಂದ ಬಿಜೆಪಿ ಬಲವಷ್ಟೇ ಪರಿಗಣನೆ

ಎನ್‌ಡಿಎ ಸರ್ಕಾರ ರಚಿಸುವುದಾಗಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಎನ್‌ಡಿಎ ಸರ್ಕಾರ ರಚಿಸುವುದಾಗಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಸರ್ಕಾರ ರಚನೆಗೆ ಆಮಂತ್ರಣ ನೀಡುವಾಗ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪರಿಗಣಿಸಿರುವುದು ಬಿಜೆಪಿಯ ಸಂಖ್ಯಾಬಲವನ್ನು ಮಾತ್ರ. ಲೋಕಸಭೆಯಲ್ಲಿ ಸರಳ ಬಹುಮತಕ್ಕೆ 272 ಸದಸ್ಯರ ಅಗತ್ಯವಿದ್ದು, ಬಿಜೆಪಿ 282 ಸದಸ್ಯರನ್ನು ಹೊಂದಿದೆ. ಹೀಗಾಗಿ ರಾಷ್ಟ್ರಪತಿಗಳು ಬಿಜೆಪಿ ಸಂಖ್ಯಾಬಲವನ್ನು ಮಾತ್ರ ಪರಿಗಣಿಸಿದ್ದಾರೆ.
ಮಧ್ಯಾಹ್ನ 3.15ಕ್ಕೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದ ನರೇಂದ್ರ ಮೋದಿ ಅವರಿಗೆ ಪ್ರಣಬ್ ಸರ್ಕಾರ ರಚನೆಗೆ ಆಹ್ವಾನ ನೀಡುವ ಪತ್ರ ಹಸ್ತಾಂತರಿಸಿದರು. ಅದರಲ್ಲಿ 'ಬಿಜೆಪಿ ಸಂಸದೀಯ ಪಕ್ಷದ ನಾಯಕ' ಎಂದೇ ನಮೂದಿಸಲಾಗಿದೆ.

 ಪ್ರಣಬ್ ಪತ್ರದಲ್ಲೇನಿದೆ?
'ಶ್ರೀ ನರೇಂದ್ರ ಮೋದಿಜಿ, ಹಾರ್ದಿಕ ಅಭಿನಂದನೆಗಳು. ನಿಮ್ಮನ್ನು ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ ಸಿಂಗ್ ಲಿಖಿತವಾಗಿ ತಿಳಿಸಿದ್ದಾರೆ. ಹೀಗಾಗಿ ಭಾರತೀಯ ಸಂವಿಧಾನದ 75ನೇ ವಿಧಿಯ ಉಪವಿಧಿ 1ರ ಪ್ರಕಾರ ನಿಮ್ಮನ್ನು ಭಾರತದ ಪ್ರಧಾನಿಯಾಗಿ ನೇಮಕ ಮಾಡಿದ್ದೇನೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಸಚಿವ ಸಂಪುಟದ ಇತರ ಸದಸ್ಯರ ಯಾದಿಯನ್ನು ನನಗೆ ನೀಡುವಂತೆ ಸಲಹೆ ಮಾಡುತ್ತೇನೆ'.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT