ತಾನಾಜಿ ಸಾವಂತ್  
ದೇಶ

ಸಂಪುಟ ಸಭೆಯಲ್ಲಿ ಅಜಿತ್ ಪವಾರ್ ಪಕ್ಕದಲ್ಲಿ ಕೂತರೆ ವಾಂತಿ ಬರುವಂತಾಗುತ್ತದೆ: ಶಿವಸೇನೆ ಸಚಿವ ತಾನಾಜಿ ಸಾವಂತ್

ಎನ್ ಸಿಪಿ ನಾಯಕ ಅಜಿತ್ ಪವಾರ್ ಪಕ್ಕ ಕುಳಿತರೆ ವಾಂತಿ ಬರುತ್ತೆ ಎಂದು ಸಚಿವ ತಾನಾಜಿ ಸಾವಂತ್ ಹೇಳಿದ್ದಾರೆ. ನಾನೆಂದೂ ಎನ್ ಸಿಪಿ ನಾಯಕತ್ವದ ಸಾಮೀಪ್ಯದಲ್ಲಿ ಇರಲಿಲ್ಲ. ಅವರ ಪಕ್ಕದಲ್ಲಿ ಕುಳಿತದ್ದೇ ಶಾರೀರಿಕ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಯಿತು

ಮುಂಬಯಿ: ಮುಂಬರುವ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ, ಆದರೆ ಮಹಾಮೈತ್ರಿಕೂಟದಲ್ಲಿನ ಬಿರುಕು ಪದೇ ಪದೇ ಗೋಚರಿಸುತ್ತಿದೆ. ಇದಕ್ಕೆ ಬೆಂಬಲ ನೀಡುವಂತೆ ಆರೋಗ್ಯ ಸಚಿವ ತಾನಾಜಿ ಸಾವಂತ್ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ,

ಎನ್ ಸಿಪಿ ನಾಯಕ ಅಜಿತ್ ಪವಾರ್ ಪಕ್ಕ ಕುಳಿತರೆ ವಾಂತಿ ಬರುತ್ತೆ ಎಂದು ಸಚಿವ ತಾನಾಜಿ ಸಾವಂತ್ ಹೇಳಿದ್ದಾರೆ. ನಾನೆಂದೂ ಎನ್ ಸಿಪಿ ನಾಯಕತ್ವದ ಸಾಮೀಪ್ಯದಲ್ಲಿ ಇರಲಿಲ್ಲ. ಅವರ ಪಕ್ಕದಲ್ಲಿ ಕುಳಿತದ್ದೇ ಶಾರೀರಿಕ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಯಿತು ಎಂದು ಸಾವಂತ್ ಹೇಳಿದ್ದಾರೆ. ಜೀವನದಲ್ಲಿ ನಾನೆಂದೂ ಎನ್ ಸಿಪಿ ಜತೆಗೆ ಇರಲಿಲ್ಲ. ನಾವು ಅಕ್ಕಪಕ್ಕ ಕುಳಿತೆವು. ಆದರೆ ಹೊರಬಂದ ಬಳಿಕ ವಾಂತಿ ಬರುವಂತಾಯಿತು ಎಂದು ವಿವರಿಸಿದ್ದಾರೆ. ನಾನು ಕಟ್ಟಾ ಶಿವಸೇನೆಯ ಸೈನಿಕ. ಕಾಂಗ್ರೆಸ್ ಹಾಗೂ ಎನ್ ಸಿಪಿ ಜತೆ ನಾನು ಜೀವನದಲ್ಲಿ ಎಂದೂ ಸನಿಹದಲ್ಲಿ ಇರಲಿಲ್ಲ. ವಿದ್ಯಾರ್ಥಿ ಜೀವನದಿಂದಲೂ ಅಂಥ ಪರಿಸ್ಥಿತಿ ಬರಲಿಲ್ಲ. ಇದು ವಾಸ್ತವ. ಇಂದು ಕೂಡಾ ಸಂಪುಟ ಸಭೆಯಲ್ಲಿ ನಾನು ಅವರ ಪಕ್ಕ ಕುಳಿತರೆ ಹೊರಬಂದ ಬಳಿಕ ವಾಂತಿ ಮಾಡಿಕೊಳ್ಳುವಂತಾಗುತ್ತದೆ. ಈ ಹೇಳಿಕೆಗೆ ನಾನು ಬದ್ಧ ಎಂದು ಸಾರ್ವಜನಿಕ ಸಮಾರಂಭದಲ್ಲಿ ಹೇಳಿದರು.

ಆದರೆ ಎನ್ ಸಿಪಿ ನಾಯಕರು ಇದಕ್ಕೆ ಸೌಮ್ಯವಾಗಿ ಪ್ರತಿಕ್ರಿಯಿಸಿದ್ದಾರೆ. "ತಾನಾಜಿ ಸಾವಂತ್ ಅವರ ವಾಂತಿಗೆ ಕಾರಣ ಏನು ಗೊತ್ತಿಲ್ಲ. ತಾನಾಜಿ ಸಾವಂತ್ ಆರೋಗ್ಯ ಸಚಿವರು. ಬಹುಶಃ ಆರೋಗ್ಯ ಪರಿಸ್ಥಿತಿ ಅದಕ್ಕೆ ಕಾರಣವಾಗಿರಬೇಕು. ಆದರೆ ಮಹಾಯುತಿಯಲ್ಲಿ ಇದ್ದುಕೊಂಡು, ಅವರು ವಾಂತಿ ಮಾಡಿಕೊಳ್ಳುತ್ತಾರೆ ಎಂದಾದರೆ, ಅದಕ್ಕೆ ಕಾರಣ ಏನು ಎಂದು ಏಕನಾಥ್ ಶಿಂಧೆಯವರೇ ಹೇಳಬೇಕು" ಎಂದು ಎನ್ ಸಿಪಿ ಶಾಸಕ ಅಮೋಲ್ ಮಿಟ್ಕರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT