ಸಾಂದರ್ಭಿಕ ಚಿತ್ರ 
ದೇಶ

ಕಾಂಗ್ರೆಸ್ ನ ಹೂಡಾ ಭಾಗಿಯಾಗಿರುವ ಭೂ ವಂಚನೆ ಪ್ರಕರಣ: 300 ಕೋಟಿ ರೂ. ಮೌಲ್ಯದ ಭೂಮಿ ED ಜಪ್ತಿ!

ದೆಹಲಿಯ ಗಡಿಯಲ್ಲಿರುವ ಹರಿಯಾಣದ ಗುರುಗ್ರಾಮ್ ಜಿಲ್ಲೆಯ ಹರ್ಸಾರು ತಹಸಿಲ್‌ನ ಬಶಾರಿಯಾ ಗ್ರಾಮದಲ್ಲಿ 88.29 ಎಕರೆ ಭೂಮಿ ಇದೆ. ಈ ಜಮೀನಿನ ಮೌಲ್ಯ 300.11 ಕೋಟಿ ರೂಪಾಯಿ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯಲ್ಲಿ ರಿಯಲ್ ಎಸ್ಟೇಟ್ ಸಮೂಹ M3M ಗೆ ಸೇರಿದ ಗುರುಗ್ರಾಮ್ ನಲ್ಲಿನ ಸುಮಾರು 300 ಕೋಟಿ ರೂ.ಮೊತ್ತದ ಭೂಮಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ಹೇಳಿದೆ.

ಈ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಂದ್ರಿಯ ತನಿಖಾ ಸಂಸ್ಥೆ ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ. ದೆಹಲಿಯ ಗಡಿಯಲ್ಲಿರುವ ಹರಿಯಾಣದ ಗುರುಗ್ರಾಮ್ ಜಿಲ್ಲೆಯ ಹರ್ಸಾರು ತಹಸಿಲ್‌ನ ಬಶಾರಿಯಾ ಗ್ರಾಮದಲ್ಲಿ 88.29 ಎಕರೆ ಭೂಮಿ ಇದೆ. ಈ ಜಮೀನಿನ ಮೌಲ್ಯ 300.11 ಕೋಟಿ ರೂಪಾಯಿ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಹರಿಯಾಣ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹೂಡಾ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಮಾಜಿ ನಿರ್ದೇಶಕ ತ್ರಿಲೋಕ್ ಚಂದ್ ಗುಪ್ತಾ; ರಿಯಾಲ್ಟಿ ಗ್ರೂಪ್ RS ಇನ್ಫ್ರಾಸ್ಟ್ರಕ್ಚರ್ ಪ್ರೈ. ಲಿಮಿಟೆಡ್ ಮತ್ತಿತರ 14 ಕಂಪನಿಗಳ ವಿರುದ್ಧ ಇಡಿ ಎಫ್ ಐಆರ್ ದಾಖಲಿಸಿದ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

ಎರಡು ಬಾರಿ ಪ್ರಜ್ಞಾಹೀನರಾದ ಮಾಜಿ ಉಪ ರಾಷ್ಟ್ರಪತಿ Jagdeep Dhankhar, ಆಸ್ಪತ್ರೆಗೆ ದಾಖಲು!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

SCROLL FOR NEXT