ರಾಜ್ಯ

ಪಕ್ಷದ ಪಿತೂರಿ, ದೇವೇಗೌಡರ ಕಾಕದೃಷ್ಟಿಯಿಂದ ಸೋಲು: ಮಾಜಿ ಸಂಸದ ಜಿ.ಎಸ್. ಬಸವರಾಜು

ತುಮಕೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕಾಕದೃಷ್ಟಿ, ಕಾಂಗ್ರೆಸ್- ಜೆಡಿಎಸ್ ಒಳ ಒಪ್ಪಂದ, ನಮ್ಮದೇ ಪಕ್ಷದ ಕೆಲವು ನೀಚರ ಪಿತೂರಿಯಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು ಎಂದು ತುಮಕೂರು ಮಾಜಿ ಸಂಸದ ಜಿ.ಎಸ್. ಬಸವರಾಜ್ ವಿಶ್ಲೇಷಿಸಿದರು.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ 2- 3 ದಿನ ಇರುವ ಸಂದರ್ಭದಲ್ಲಿ ನನಗೆ ಈ ವಿಷಯ ತಿಳಿದಿದೆ. ಚುನಾವಣೆ ನಂತರ ದೇವೇಗೌಡರ ಕುತಂತ್ರ, ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ವಿಷಯ ತಿಳಿದ ಎ. ಕೃಷ್ಣಪ್ಪ ಅವರು ಅದೇ ಕೊರಗಿನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದರು.
ಸೋಲಿಗೆ ನಮ್ಮ ಪಕ್ಷದಲ್ಲಿರುವ ಕೆಲವರ ಪಿತೂರಿಯೂ ಕಾರಣವಾಗಿದ್ದು, ಆ ನೀಚರ ಹೆಸರನ್ನು ಶೀಘ್ರದಲ್ಲೇ ಬಹಿರಂಗಪಡಿಸುವೆ. ತನಿಖೆ ಮಾಡಿ, ಸ್ಪಷ್ಟಪಡಿಸುವೆ. ಈಗಲೇ ಹೇಳಲಾರೆ ಎಂದು ಪ್ರಶ್ನೆಯೊಂದಕ್ಕೆ ಜಿಎಸ್‌ಬಿ ಉತ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ, ಬೆಂಗಳೂರಿನಲ್ಲಿ ಶಾಸಕರಿಗೆ ಡಿನ್ನರ್ ಮೀಟಿಂಗ್ ಏರ್ಪಡಿಸಿದ್ದೇನೆ': ಡಿ ಕೆ ಶಿವಕುಮಾರ್-Video

ಹೆಜ್ಬೊಲ್ಲಾಹ್‌ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ

SCROLL FOR NEXT