ಸಂಗ್ರಹ ಚಿತ್ರ 
ಫೀಫಾ ವಿಶ್ವ ಕಪ್ 2018

2017ರ ಭಾರತೀಯ ಫುಟ್ಬಾಲ್ ಸಂಸ್ಥೆಯ ಪ್ರಶಸ್ತಿ ಪ್ರಕಟ: ಸುನಿಲ್ ಚೇಟ್ರಿಗೆ ವರ್ಷದ ಆಟಗಾರ ಪ್ರಶಸ್ತಿ ಗರಿ

ಭಾರತೀಯ ಫುಟ್ಬಾಲ್ ಸಂಸ್ಥೆ (ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್-IAFF) ತನ್ನ 2017ನೇ ಸಾಲಿನ ಪ್ರಶಸ್ತಿ ಪ್ರಕಟ ಮಾಡಿದ್ದು, ಭಾರತ ತಂಡದ ಸ್ಟಾರ್ ಆಟಗಾರ ಸುನಿಲ್ ಚೇಟ್ರಿ ವರ್ಷದ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮುಂಬೈ: ಭಾರತೀಯ ಫುಟ್ಬಾಲ್ ಸಂಸ್ಥೆ (ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್-IAFF) ತನ್ನ 2017ನೇ ಸಾಲಿನ ಪ್ರಶಸ್ತಿ ಪ್ರಕಟ ಮಾಡಿದ್ದು, ಭಾರತ ತಂಡದ ಸ್ಟಾರ್ ಆಟಗಾರ ಸುನಿಲ್ ಚೇಟ್ರಿ ವರ್ಷದ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
33ವರ್ಷದ ಸುನಿಲ್ ಚೇಟ್ರಿ ಇತ್ತೀಚೆಗಷ್ಟೇ ತಮ್ಮ ನೂರನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುವ ಮೂಲಕ ಭಾರತದ ಪರ 100 ಅಂತಾರಾಷ್ಟ್ರೀಯ ಪಂದ್ಯವಾಡಿದ ಭಾರತದ ಎರಡನೇ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದರು. ಇದಕ್ಕೂ ಮೊದಲು ಭಾರತದ ಮಾಜಿ ಫುಟ್ಬಾಲ್ ಆಟಗಾರ ಬೈಚುಂಗ್ ಭುಟಿಯಾ ಅವರು ಭಾರತದ ಪರ 100 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು. ಚೇಟ್ರಿ ಅಪೂರ್ವ ಸಾಧನೆಗಾಗಿ ಐಎಎಫ್ಎಫ್ ಸಂಸ್ಥೆ ವರ್ಷದ ಆಟಗಾರ ಎಂಬ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇನ್ನು ಇದೇ ಚೇಟ್ರಿ ಬೆಂಗಳೂರು ಎಫ್ ಸಿ ತಂಡದ ಪರ ಆಡುತ್ತಿದ್ದಾರೆ.
ಅಂತೆಯೇ ಭಾರತದ ಮಹಿಳಾ ಫುಟ್ಬಾಲ್ ನ ಸ್ಟಾರ್ ಆಟಗಾರ್ತಿ ಕಮಲಾದೇವಿ ಅವರೂ ಕೂಡ ಮಹಿಳೆಯರ ತಂಡದಿಂದ ವರ್ಷದ ಆಟಗಾರ್ತಿ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಉಳಿದಂತೆ ಈ ಹಿಂದೆ ನಡೆದ ನಾಲ್ಕು ರಾಷ್ಟ್ರಗಳ ಇಂಟರ್ ಕಾಂಟಿನೆಂಟಲ್  ಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಯುವ ಆಟಗಾರ ಅನಿರುದ್ಧ ತಾಪಾ 2017ನೇ ಸಾಲಿನ ಅತ್ಯುತ್ತಮ ಉದಯೋನ್ಮುಖ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಇದೇ ರೀತಿ ಮಹಿಳಾ ತಂಡ ಯುವ ಆಟಗಾರ್ತಿ ಇ ಪಂತೋಯ್ ಅವರು ಮಹಿಳೆಯರ ವಿಭಾಗದ ಉದಯೋನ್ಮುಖ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಕೇರಳ ಫುಟ್ಬಾಲ್ ಸಂಸ್ಥೆಗೆ ಈ ಬಾರಿಯೂ ಉತ್ತಮ ಕ್ರೀಡಾಭಿವೃದ್ಧಿ ಕಾರ್ಯಕ್ರಮಗಳ ನೀಡಿದ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಅಂತೆಯೇ ಭಾರತೀಯ ಫುಟ್ಬಾಲ್ಗೆ ದೀರ್ಘಕಾಲದ ಕೊಡುಗೆ ನೀಡಿದ ಅತ್ಯುತ್ತಮ ಸಂಸ್ಥೆ ವಿಭಾಗದಲ್ಲಿ ಖ್ಯಾತ ದ್ವಿಚಕ್ರವಾಹನ ತಯಾರಿಕಾ ಸಂಸ್ಥೆ ಹೀರೋ ಮೋಟೋಕಾರ್ಪ್ ಗೆ ಪ್ರಶಸ್ತಿ ದಕ್ಕಿದೆ. 2017ನೇ ಸಾಲಿನ ಉತ್ತಮ ರೆಫರಿ ವಿಭಾಗದಲ್ಲಿ ಸಿಆರ್ ಕೃಷ್ಣನ್ ಮತ್ತು 2017ನೇ ಸಾಲಿನ ಸಹಾಯಕ ರೆಫರಿ ವಿಭಾಗದಲ್ಲಿ ಅಸ್ಸಾಂನ ಸುಮಂತಾ ದತ್ತಾ ಅವರಿಗೆ ಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT