ಪತ್ರಕರ್ತೆಗೆ ಮುತ್ತು ನೀಡಲು ಬಂದ ದುಷ್ಕರ್ಮಿ 
ಫೀಫಾ ವಿಶ್ವ ಕಪ್ 2018

ಬೇಕಿತ್ತಾ... ಲೈವ್ ವೇಳೆ ಮುತ್ತುಕೊಡಲು ಬಂದವನ ತರಾಟಗೆ ತೆಗೆದುಕೊಂಡ ಬ್ರೆಜಿಲ್ ಪತ್ರಕರ್ತೆ!

ನೇರ ಪ್ರಸಾರದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಗೆ ಮುತ್ತು ನೀಡಿ ಅಸಭ್ಯವಾಗಿ ವರ್ತಿಸಿದ್ದ ದುಷ್ಕರ್ಮಿ ಕುರಿತ ಸುದ್ದಿ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ನಡೆದಿದ್ದು, ಈ ಬಾರಿ ಪತ್ರಕರ್ತೆಯೇ ದುಷ್ಕರ್ಮಿಯ ಮಾನ ಹರಾಜು ಹಾಕಿದ್ದಾಳೆ.

ಮಾಸ್ಕೋ: ಕೊಲಂಬಿಯ ಮೂಲದ ಪತ್ರಕರ್ತೆ ಫುಟ್ಬಾಲ್ ಪಂದ್ಯದ ಕುರಿತು ನೇರ ಪ್ರಸಾರದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಗೆ ಮುತ್ತು ನೀಡಿ ಅಸಭ್ಯವಾಗಿ ವರ್ತಿಸಿದ್ದ ದುಷ್ಕರ್ಮಿ ಕುರಿತ ಸುದ್ದಿ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ನಡೆದಿದ್ದು, ಈ ಬಾರಿ ಪತ್ರಕರ್ತೆಯೇ ದುಷ್ಕರ್ಮಿಯ ಮಾನ ಹರಾಜು ಹಾಕಿದ್ದಾಳೆ.
ಹೌದು.. ಬ್ರೆಜಿಲ್ ಮೂಲದ ಪತ್ರಕರ್ತೆ ಲೈವ್ ನೀಡುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿದ್ದ ವ್ಯಕ್ತಿಯೋರ್ವ ಆಕೆಗೆ ಮುತ್ತು ನೀಡಲು ಹೋಗಿ ಅಪಮಾನಕ್ಕೀಡಾಗಿದ್ದಾನೆ. ಯೆಕಟೇನ್ ಬರ್ಗ್ ನಲ್ಲಿ ಜಪಾನ್ ಮತ್ತು ಸೆನೆಗಲ್ ನಡುವೆ ನಡೆಯಬೇಕಿದ್ದ ಫೀಫಾ ವಿಶ್ವಕಪ್ ಟೂರ್ನಿಯ ಪಂದ್ಯದ ಕುರಿತು ಬ್ರೆಜಿಲ್ ಮೂಲಕ ಪತ್ರಕರ್ತೆ ಜೂಲಿಯಾ ಗಿಮಾರಾಸ್ ನೇರ ಪ್ರಸಾರದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಗೆ ದುಷ್ಕರ್ಮಿಯೋರ್ವ ಮುತ್ತು ನೀಡಲು ಪ್ರಯತ್ನಿಸಿದ್ದಾನೆ. 
ಆತ ಹತ್ತಿರ ಬರುತ್ತಿದ್ದಂತೆಯೇ ಅಪಾಯದ ಕುರಿತು ಅರಿತ ಪತ್ರಕರ್ತೆ ಕೂಡಲೇ ದೂರಸರಿದು, ಆತನ ಕೃತ್ಯಕ್ಕೆ ಲೈವ್ ನಲ್ಲೇ ಹಿಗ್ಗಾಮುಗ್ಗಾ ಜಾಡಿಸಿದ್ದಾಳೆ. ಮೊದಲು ಹೆಣ್ಣು ಮಕ್ಕಳನ್ನು ಗೌರವಿಸುವುದನ್ನು ಕಲಿಯಿರಿ, ಎಂದಿಗೂ ಯಾರಿಗೂ ಹೀಗೆ ಮಾಡಬಾರದು. ಇದಕ್ಕೆಲ್ಲಾ ನಾನು ಅನುವು ಮಾಡಿಕೊಡುವುದಿಲ್ಲ ಎಂದು ಕಿಡಿಕಾರಿದ್ದಾಳೆ. ಆತ ಕೂಡಲೇ ಕ್ಷಮೆ ಯಾಚಿಸಿರುವ ಆಡಿಯೋ ಕೂಡ ವಿಡಿಯೋದಲ್ಲಿ ದಾಖಲಾಗಿದೆ. 
ಇನ್ನು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದ್ದು, ಪತ್ರಕರ್ತೆಯ ದಿಟ್ಟತನಕ್ಕೆ ಟ್ವೀಟಿಗರು ಬೆಂಬಲ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

'ಹನೂರು ಎನ್‌ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!

ನೂರಾರು ಪುರುಷರ ಮುಂದೆ ಒಳ ಉಡುಪಿನಲ್ಲಿ ಡ್ಯಾನ್ಸ್: ಶೂಟಿಂಗ್ ವೇಳೆ ಅನುಭವಿಸಿದ ಮುಜುಗರವನ್ನು ಹಂಚಿಕೊಂಡ ಬಾಲಿವುಡ್ ನಟಿ ದಿಯಾ ಮಿರ್ಜಾ!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!