ಹೋಳಿಗೆ 
ಅಡುಗೆ

ಯುಗಾದಿ ವಿಶೇಷ: ಹೋಳಿಗೆ

ರುಚಿಕರವಾದ ಹೋಳಿಗೆ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಮೈದಾ ಹಿಟ್ಟು ಅಥವಾ ಚಿರೋಟಿ ರವೆ -1 ಬಟ್ಟಲು
  • ಅರಿಶಿಣದ ಪುಡಿ- ಸ್ವಲ್ಪ
  • ಉಪ್ಪು-ಚಿಟಿಕೆಯಷ್ಟು
  • ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
  • ತೊಗರಿ ಬೇಳೆ- 2 ಬಟ್ಟಲು
  • ಏಲಕ್ಕಿ ಪುಡಿ- ಸ್ವಲ್ಪ
  • ಕೊಬ್ಬರಿ ಪುಡಿ- ಮುಕ್ಕಾಲು ಬಟ್ಟಲು

ಮಾಡುವ ವಿಧಾನ...

  • ಮೊದಲಿಗೆ ಮೈದಾ ಹಿಟ್ಟು ಅಥವಾ ಚಿರೋಟಿ ರವೆಯನ್ನು ಒಂದು ಪಾತ್ರೆಗೆ ಹಾಕಿಕೊಳ್ಳಿ. ಚಿಟಿಕೆ ಉಪ್ಪು, ಅರಿಶಿಣ ಹಾಕಿ ಮಿಶ್ರಣ ಮಾಡಿ. ನಂತರ ಸ್ವಲ್ಪ, ಸ್ವಲ್ಪವೇ ನೀರಿ ಸೇರಿಸಿ ಹಿಟ್ಟನ್ನು ತಯಾರಿಸಿಕೊಳ್ಳಿ. ಹಿಟ್ಟು ಜಿಗುಟಾದ ಮತ್ತು ನಯವಾಗಿರುವುದನ್ನು ಖಚಿತಪಡಿಸಿಕೊಳ್ಳಿ.
  • ಬಳಿಕ ಹಿಟ್ಟು ಎಣ್ಣೆಯಲ್ಲಿ ಮುಳುಗಿಸುವಷ್ಟು ಎಣ್ಣೆಯನ್ನು ಹಾಕಿ. ಬಳಿಕ ಹಿಟ್ಟನ್ನು 3 ಗಂಟೆ ಅಥವಾಗ ಅದಕ್ಕಿಂತಲೂ ಹೆಚ್ಚು ಮುಚ್ಚಿಟ್ಟು, ನೆನೆಯಲು ಬಿಡಿ.
  • ನಂತರ ಪ್ರೆಶರ್ ಕುಕ್ಕರ್ ನಲ್ಲಿ ಬೇಳೆ, ಅರಿಶಿಣದ ಪುಡಿ ಹಾಗೂ 1 ಚಮಚ ಎಣ್ಣೆಯನ್ನು ಹಾಕಿ. ಮಧ್ಯಮ ಉರಿಯಲ್ಲಿ 2 ಕೂಗು ಕೂಗಿಸಿಕೊಳ್ಳಿ.
  • ನಂತರ ಪ್ರೆಶರ್ ಕುಕ್ಕರ್ ತಣ್ಣದಾದ ಬಳಿಕ ನೀರನ್ನು ಬಸಿದುಕೊಳ್ಳಿ. ಬಳಿಕ ಬೇಳೆಯನ್ನು ದೊಡ್ಡ ಪಾತ್ರೆಗೆ ವರ್ಗಾಯಿಸಿಕೊಂಡು, ಮರಳಿ ಬೇಳೆಯನ್ನು ಒಲೆಯ ಮೇಲಿಟ್ಟು ಅದಕ್ಕೆ, 2 ಬಟ್ಟಲು ಬೆಲ್ಲ ಸೇರಿ ಚೆನ್ನಾಗಿ ಮಿಶ್ರಣ ಮಾಡಿ. ಮಿಶ್ರಣ ದಪ್ಪಗಾಗುವವರೆ, ತಳ ಹತ್ತದಂತೆ ಕೈಯಾಡಿಸುತ್ತಾ ನೋಡಿಕೊಳ್ಳಿ.
  • ಮಿಶ್ರಣ ಗಟ್ಟಿಯಾದ ಬಳಿಕ ಇದಕ್ಕೆ ಏಲಕ್ಕಿ ಪುಡಿ, ಹಾಗೂ ಕೊಬ್ಬರಿ ಪುಡಿಯನ್ನು ಸೇರಿಸಿ ಮಿಶ್ರಣ ಮಾಡಿ.
  • ಇದು ತಣ್ಣಗಾದ ಬಳಿಕ ಅನುಕೂಲವಿದ್ದರೆ ಒರಳಿನಲ್ಲಿ ಹಾಕಿ ರುಬ್ಬಿಕೊಳ್ಳಿ. ಇಲ್ಲದಿದ್ದರೆ, ಮಿಕ್ಸಿ ಜಾರ್'ಗೆ ಹಾಕಿಕೊಂಡು ಪೇಸ್ಟ್ ಮಾಡಿಕೊಳ್ಳಿ.
  • ನಂತರ ಈಗಾಗಲೇ ಸಿದ್ಧಪಡಿಸಿಕೊಂಡಿದ್ದ ಹಿಟ್ಟನ್ನು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಂಡು, ಕೈಯಿಂದ ಚಪ್ಪಟೆ ಮಾಡಿ, ಮಧ್ಯೆ ಬೇಳೆಯ ಊರಣವನ್ನು ಇಟ್ಟು ಎಲ್ಲಾ ಬದಿಗಳನ್ನೂ ಹಿಟ್ಟಿನಿಂದ ಮುಚ್ಚಿ. ಬಳಿಕ ಈ ಉಂಡೆಯನ್ನು ತಪಾತಿಯಂತೆ ತಟ್ಟಿಕೊಳ್ಳಿ.
  • ಒಲೆಯ ಮೇಲೆ ತವಾ ಇಟ್ಟು, ಕಾದ ನಂತರ ಒಬ್ಬಟ್ಟನ್ನು ತವಾ ಮೇಲೆ ಹಾಕಿ, ಎಣ್ಣೆ ಹಾಕಿ ಎರಡೂ ಬದಿಯಲ್ಲಿ ಚಿನ್ನದ ಬಣ್ಣ ಬರುವವರೆಗೆ ಬೇಯಿಸಿಕೊಂಡರೆ, ರುಚಿಕರವಾದ ಬೇಳೆ ಹೋಳಿಗೆ ಸವಿಯಲು ಸಿದ್ಧ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT