ಸಂಗ್ರಹ ಚಿತ್ರ 
ಅಡುಗೆ

ಫಿಶ್ ಕರಿ - Fish Curry Recipe in Kannada

ರುಚಿಕರವಾದ ಫಿಶ್ ಕರಿ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಮೀನು - 4 (ಮಧ್ಯಮ ಅಥವಾ ಚಿಕ್ಕ ಗಾತ್ರದ್ದು)

  • ಹಸಿಶುಂಠಿ - 1 ಚಿಕ್ಕ ಚಮಚ

  • ಈರುಳ್ಳಿ - 5-8 (ಹೆಚ್ಚಿದ್ದು)

  • ಬೆಳ್ಳುಳ್ಳಿ - 5-8 ಎಸಳು (ಹೆಚ್ಚಿದ್ದು)

  • ಕರಿಬೇವು - ಸ್ವಲ್ಪ

  • ಹುಣಸೆಹುಳಿಯ ರಸ - ಅರ್ಧ ಬಟ್ಟಲು

  • ಕೊಬ್ಬರಿ ಎಣ್ಣೆ - 2 ದೊಡ್ಡ ಚಮಚ

  • ಟೊಮೇಟೋ- 1 (ಹೆಚ್ಚಿದ್ದು)

  • ಕೆಂಪು ಮೆಣಸಿನ ಪುಡಿ - 2 ಚಿಕ್ಕ ಚಮಚ

  • ದನಿಯ ಪುಡಿ - ¾ ಚಿಕ್ಕ ಚಮಚ

  • ಕಾಳುಮೆಣಸಿನ ಪುಡಿ - 1 ಚಿಕ್ಕ ಚಮಚ

  • ಅರಿಶಿನ ಪುಡಿ - ¼ ಚಿಕ್ಕ ಚಮಚ

  • ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ...

ಮೊದಲು ಮೀನನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ, ಒಳಭಾಗದಲ್ಲಿ ಯಾವುದೇ ಅಂಗ ಅಥವಾ ರಕ್ತ ಇರದಂತೆ ನೋಡಿಕೊಳ್ಳಿ. ಒಂದು ಪಾತ್ರೆಯಲ್ಲಿ ಎಲ್ಲಾ ಮಸಾಲೆ ಪದಾರ್ಥಗಳನ್ನು ಅಂದರೆ, ಈರುಳ್ಳಿಯ ಅರ್ಧ ಭಾಗ, ದನಿಯಾ ಪುಡಿ, ಮೆಣಸಿನ ಪುಡಿ, ಅರಿಶಿನ ಪುಡಿ, ಕಾಳುಮೆಣಸಿನ ಪುಡಿ, ಉಪ್ಪು ಟೊಮೇಟೋ ಎಲ್ಲವನ್ನೂ ಬ್ಲೆಂಡರಿನಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

ಈಗ ಪಾತ್ರೆಯನ್ನು ಒಲೆಯ ಮೇಲಿಟ್ಟು ಬಿಸಿಮಾಡಿ. ಕೊಂಚ ಬಿಸಿಯಾದ ಬಳಿಕ ಎಣ್ಣೆ ಹಾಕಿ ಒಂದು ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಕಿ ಈರುಳ್ಳಿ ಕೆಂಪಗಾಗುವವರೆಗೆ ಬಾಡಿಸಿ.

ಬಳಿಕ ಮಿಕ್ಸಿಯಲ್ಲಿ ರುಬ್ಬಿಕೊಂಡಿದ್ದ ಮಸಾಲೆಯನ್ನು ಹಾಕಿ, ಚೆನ್ನಾಗಿ ಮಿಶ್ರಣ ಮಾಡಿ. ಮಧ್ಯಮ ಉರಿಯಲ್ಲಿ ಈ ಮಸಾಲೆಯಿಂದ ಎಣ್ಣೆ ಬಿಡುವವರೆಗೂ ತಿರುವುತ್ತಿರಿ.

ಇದೀಗ ಹುಣಸೆ ರಸ ಬೆರೆಸಿ ಮಿಶ್ರಣ ಮಾಡಿ. ನಿಮ್ಮ ಆದ್ಯತೆಗೆ ತಕ್ಕಷ್ಟು ನೀರು ಸೇರಿಸಿ ನಡುನಡುವೆ ತಿರುವುತ್ತಾ ಕುದಿಸಿ. ನೀರು ಕುದಿಯಲು ಆರಂಭವಾದ ಬಳಿಕ ಮೀನು ಮತ್ತು ಕರಿಬೇವಿನ ಎಲೆಗಳನ್ನು ಹಾಕಿ ಮುಚ್ಚಳ ಮುಚ್ಚಿ ಮೀನು ಬೇಯುವವರೆಗೂ ಮಧ್ಯಮ ಉರಿಯಲ್ಲಿ ಕುದಿಸಿ. ಕೆಲವು ನಿಮಿಷಗಳ ಬಳಿಕ ಸಾರಿನ ರುಚಿಯನ್ನು ನೋಡಿ ಅಗತ್ಯವೆನಿಸಿದಷ್ಟು ಉಪ್ಪು ಸೇರಿಸಿ. ಸ್ವಲ್ಪ ಸಮಯ ಕುದಿಸಿ. ಮೀನು ಬೆಂದಿದೆ ಎಂದು ಖಾತ್ರಿಯಾದ ಬಳಿಕ ಪಾತ್ರೆಯನ್ನು ಒಲೆಯ ಮೇಲಿನಿಂದ ಕೆಳಗಿಳಿಸಿ. ಇದೀಗ ರುಚಿಕರವಾದ ಫಿಶ್ ಕರಿ ಸವಿಯಲು ಸಿದ್ಧ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT