ಸಂಗ್ರಹ ಚಿತ್ರ 
ಗಣೇಶ ಚತುರ್ಥಿ

ರಾಜನಿಗೆ ಸ್ವರ್ಣಗೌರಿ ವ್ರತಾ ಮಹಿಮೆ ಹೇಳಿದ ಅಪ್ಸರೆಯರು!

ರಾಜ ಸರೋವರದ ಬಳಿ ಹೋಗುತ್ತಾನೆ. ಆಗ ಅಲ್ಲಿ ಅನೇಕ ಅಪ್ಸರೆಯರು ಸ್ವರ್ಣಗೌರಿ ಪೂಜೆಯನ್ನು ಮಾಡುವುದರಲ್ಲಿ ನಿರತ...

ಪ್ರತಿ ವರ್ಷ ವಿನಾಯಕ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಮುತ್ತೈದೆಯರಿಗೆಲ್ಲಾ ಸಕಲ ಸೌಭಾಗ್ಯ ನೀಡುವ ಹಬ್ಬವಾಗಿದೆ. ಈ ಗೌರಿ ಹಬ್ಬ ಭಾದ್ರಪದ ಶುದ್ಧ ತದಿಗೆ ದಿನ ಬರುತ್ತದೆ. ಈ ಸ್ವರ್ಣ ಗೌರಿ ಪೂಜೆ ಹೇಗೆ ಆಚರಣೆಯಲ್ಲಿ ಬಂತು ಎನ್ನುವ ಕುರಿತು ಪೌರೌಣಿಕ ಹಿನ್ನಲೆ ಇದೆ.

ಚಂದ್ರಪ್ರಭ ಎಂಬ ರಾಜನು ಭೇಟೆಯಾಡಲು ಕಾಡಿಗೆ ಹೋಗುತ್ತಾನೆ. ಅಲ್ಲಿ ಒಂದು ಸುಂದರವಾದ ನೈಸರ್ಗಿಕ ಸಂಪತ್ತುಳ್ಳ ಸರೋವರ ಕಾಣಿಸುತ್ತದೆ. ಅದನ್ನು ನೋಡಿದ ರಾಜ ಸರೋವರದ ಬಳಿ ಹೋಗುತ್ತಾನೆ. ಆಗ ಅಲ್ಲಿ ಅನೇಕ ಅಪ್ಸರೆಯರು ಸ್ವರ್ಣಗೌರಿ ಪೂಜೆಯನ್ನು ಮಾಡುವುದರಲ್ಲಿ ನಿರತರಾಗಿರುತ್ತಾರೆ. ಇದನ್ನು ಕಂಡ ರಾಜನು ಪೂಜೆಯ ನಂತರ ಪೂಜೆಯ ಮಹತ್ವದ ಬಗ್ಗೆ ತಮಗೆ ತಿಳಿಸಬೇಕು ಎಂದು ಕೇಳಿಕೊಳ್ಳುತ್ತಾನೆ.

ಆಗ ಆ ಅಪ್ಸರೆಯರು ವ್ರತದ ಮಹಿಮೆ ಬಗ್ಗೆ ತಿಳಿಸುವರು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಿ ಇದನ್ನು ಭಾದ್ರಪದ ಶುದ್ಧ ತದಿಗೆ ದಿನ ಆಚರಿಸಬೇಕೆಂದು ತಿಳಿಸಿ 16 ಗಂಟು ಹಾಕಿದ ದಾರವನ್ನು ಕೊಡುತ್ತಾರೆ. ಆ ದಾರವನ್ನು ತೆಗೆದುಕೊಂಡು ಅರಮನೆಗೆ ಬಂದ ರಾಜ ತನ್ನ ಇಬ್ಬರು ಪತ್ನಿಯರಿಗೆ ಆ ದಾರವನ್ನು ಕೊಡುತ್ತಾನೆ.

ಮೊದಲನೆ ಪತ್ನಿ ಆ ದಾರವನ್ನು ತಿರಸ್ಕರಿಸಿ ಒಣಗಿದ ಗಿಡದ ಮೇಲೆ ಎಸೆಯುತ್ತಾಳೆ. ಆ ಗಿಡವು ದಾರದ ಮಹಿಮೆಯಿಂದ ತಕ್ಷಣ ಚಿಗುರಿ ಬೆಳೆಯತೊಡಗಿತು. ಅದನ್ನು ಕಂಡ ಕಿರಿಯ ಪತ್ನಿಯು ಆ ದಾರವನ್ನು ಧರಿಸಿ ರಾಜನು ಹೇಳಿದ ಕ್ರಮದಲ್ಲಿ ಸ್ವರ್ಣಗೌರಿ ವ್ರತವನ್ನು ಆಚರಿಸುತ್ತಾಳೆ.

ನಂತರ ಅವರಿಗೆ ಪುತ್ರ ಸಂತಾನ ಪ್ರಾಪ್ತಿಯಾಗುತ್ತದೆ. ಕಾಲ ಕಳೆದ ಮೇಲೆ ಸತಿಪತಿಯರು ಶಿವಲೋಕವನ್ನು ಹೊಂದಿ ಮುಕ್ತಿಯನ್ನು ಪಡೆದರು ಎಂದು ಪುರಣಾಗಳು ಹೇಳುತ್ತವೆ. ಸ್ವರ್ಣಗೌರಿ ಹಬ್ಬದಲ್ಲಿ ಬಾಗಿನ ಕೊಡುವುದು ಒಂದು ವಿಶೇಷ. ಅಂದರೆ ಗೌರವಪೂರ್ಣವಾಗಿ ಕೊಡುವ ದಾನ ಅಥವಾ ಸತ್ಕಾರವೆಂದು ಕರೆಯುತ್ತಾರೆ.

ಮುತ್ತೈದೆಯರು ಸ್ವರ್ಣಗೌರಿ ವ್ರತವನ್ನು ನಿಷ್ಠೆಯಿಂದ ಆಚರಿಸಿದಲ್ಲಿ ಖಂಡಿತವಾಗಿ ಸಂತಾನ ಪ್ರಾಪ್ತಿ, ಅವಿವಾಹಿತರಿಗೆ ವಿವಾಹಯೋಗ ಮತ್ತು ವಿದ್ಯಾರ್ಥಿಗಳಿಗೆ ಜ್ಞಾನ ದೊರೆಯುತ್ತದೆ ಎನ್ನುವುದು ಪುರಾಣ ಕಥೆಗಳಲ್ಲಿ ಹೇಳಲಾಗಿದೆ.

-ಮೈನಾಶ್ರೀ.ಸಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT