ಸಂಗ್ರಹ ಚಿತ್ರ 
ಗಣೇಶ ಚತುರ್ಥಿ

ಹಸಿವು ನೀಗದೆ ಕುಬೇರನನ್ನೇ ನುಂಗಲು ಹೋದ ಗಣಪ

ಕುಬೇರನ ಒಳಗಿನ ಶ್ರೀಮಂತಿಕೆ ಅಹಂ ಬಲ್ಲವನಾಗಿದ್ದ ಶಿವನು ನಕ್ಕು, ನನಗೆ ತುಂಬಾ ಕೆಲಸವಿದೆ ಕುಬೇರ...

ಮೂರು ಲೋಕಗಳಲ್ಲಿ ಎಲ್ಲರಿಗಿಂತಲೂ ಹೆಚ್ಚು ಶ್ರೀಮಂತ ತಾನೇ ಎಂಬ ಗರ್ವ ಕುಬೇರನಿಗಿತ್ತು. ಮೂರು ಲೋಕದಲ್ಲಿರುವವರಿಗೆ ತನ್ನ ಶ್ರೀಮಂತಿಕೆಯನ್ನು ಪ್ರದರ್ಶಿಸಲು ಭೂಲೋಕದ ರಾಜಮಹಾರಾಜರುಗಳನ್ನೂ ಹಾಗೂ ದೇವತೆಗಳನ್ನೂ ಆಗಾಗ್ಗೆ ಊಟಕ್ಕೆ ಕರೆಯುತ್ತಿದ್ದ. ಹೀಗೆ ಒಂದೊಮ್ಮೆ ಜಗದೊಡಯ ಶಿವನನ್ನು ಭೋಜನ ಕೂಟಕ್ಕೆ ಆಹ್ವಾನಿಸಲು ಕುಬೇರನಿಗೆ ಮನಸ್ಸಾಯಿತು.

ಕುಬೇರ ಸಂಪತ್ತಿನ ದೇವತೆ. ತನ್ನ ಸಂಪತ್ತಿನ ಬಗ್ಗೆ ಕುಬೇರನಿಗೆ ಭಾರಿ ಹೆಮ್ಮೆಯಿತ್ತು. ಒಂದು ದಿನ ಭಾರಿ ಔತಣ ಕೂಟವನ್ನು ಏರ್ಪಡಿಸಿದನು. ಶಿವ, ಪಾರ್ವತಿ ಮತ್ತು ಗಣೇಶ ಸೇರಿದಂತೆ ದೇವಾನುದೇವತೆಗಳು ಉಪಸ್ಥಿತರಿದ್ದರು. ಆದುದರಿಂದ ಅವನು ಕೈಲಾಸಕ್ಕೆ ಹೋಗಿ ಪರಮೇಶ್ವರನಿಗೆ ನಮಸ್ಕರಿಸಿ, ಸ್ವಾಮಿ ನಾಳೆ ನಮ್ಮ ಮನೆಗೆ ನೀವು ಕುಟುಂಬ ಸಮೇತರಾಗಿ ಊಟಕ್ಕೆ ಬರಬೇಕು ಎಂದು ಪ್ರಾರ್ಥಿಸಿಕೊಂಡನು.

ಕುಬೇರನ ಒಳಗಿನ ಶ್ರೀಮಂತಿಕೆ ಅಹಂ ಬಲ್ಲವನಾಗಿದ್ದ ಶಿವನು ನಕ್ಕು, ನನಗೆ ತುಂಬಾ ಕೆಲಸವಿದೆ ಕುಬೇರ. ಬರಲಾಗುವುದಿಲ್ಲ ಎಂದನು. ಆಗ ಕುಬೇರ, ಹಾಗಾದರೆ ಪಾರ್ವತೀದೇವಿಯನ್ನು ಕರೆದೊಯ್ಯುತ್ತೇನೆ ಎಂದು ಹೇಳಿದನು. ತಕ್ಷಣ ಈಶ್ವರನು ನಾನು ಬರದೇ ಪಾರ್ವತಿ ಎಲ್ಲಿಯೂ ಬರುವುದಿಲ್ಲ. ಬೇಕಾದರೇ, ಗಣೇಶನನ್ನು ಕರೆದುಕೊಂಡು ಹೋಗು ಎಂದು ಹೇಳಿದನು. ಕುಬೇರ ಅದಕ್ಕೆ ಒಪ್ಪಿ ಸಂತೋಷದಿಂದ ತನ್ನ ಮನೆಗೆ ಹೋದ.

ಮರುದಿನ ಕುಬೇರನ ಅರಮನೆಗೆ ದಿವ್ಯಾಲಂಕಾರ ಆಯಿತು. ಸಾವಿರ ಅತಿಥಿಗಳಿಗಾಗುವಷ್ಟು ಬಗೆಬಗೆಯ ಭಕ್ಷ್ಯ ಭೋಜ್ಯಗಳು ಸಿದ್ಧವಾದುವು, ಅತಿಥಿಗಳೆಲ್ಲರೂ ಬಂದು ಗಣಪತಿಯ ಬರವಿಗೆ ಕಾದು ನಿಂತರು.

ಕುಬೇರನ ಕಡೆಗೆ ಗಣಪತಿಯ ಆಗಮನವಾಯಿತು. ಗಣೇಶ ಇಲ್ಲಿ ಬಾ ಅತಿಥಿಗಳ ಪರಿಚಯ ಮಾಡಿಕೊಡುತ್ತೇನೆ ಎಂದು ಕುಬೇರನಿಗೆ ಗಣೇಶನು, ನನಗೆ ತುಂಬಾ ಹಸಿವಾಗಿದೆ. ಮೊದಲು ಊಟ ಹಾಕು ಆಮೇಲೆ ಪರಿಚಯ ಮಾಡಿಕೊಡುವೆಯಂತೆ ಎಂದು ಹೇಳಿದನು. ಕುಬೇರ ಗಣಪತಿಯನ್ನು ಊಟದ ಮನೆಗೆ ಕರೆದುಕೊಂಡು ಹೋಗಿ ಚಿನ್ನದ ತಟ್ಟೆಯಲ್ಲಿ ಊಟಕ್ಕಿಟ್ಟ.
ಮಗು ಗಣೇಶ ಉಟ ಮಾಡಲು ಆರಂಭಿಸಿದನು .

ಅಲ್ಲಿದ್ದ ಊಟವನ್ನು ಖಾಲಿ ಮಾಡಿದರೂ ಗಣೇಶನಿಗೆ ತೃಪ್ತಿಯಾಗಲಿಲ್ಲ. ನಂತರ ಕೆಲ ಅತಿಥಿಗಳು ಉಟಕ್ಕೆಂದು ಬಂದು ನೋಡಿದಲ್ಲಿ ಎಲ್ಲ ತಟ್ಟೆಗಳು ಹಾಗೂ ವಿವಿಧ ಭಕ್ಷ್ಯಗಳು ಖಾಲಿಯಾಗಿದ್ದವು ಅರೇ ಅದೇನು ಅಚ್ಚರಿ..‍‍! ಅಲ್ಲಿದ್ದ ಭಕ್ಷ್ಯಗಳನ್ನು ಖಾಲಿ ಮಾಡಿದ ಗಣೇಶ ಅಲ್ಲಿದ್ದ ಪಾತ್ರೆಪಡಗ, ಪೀಠೋಪಕರಣಗಳು ಮತ್ತು ಕುಬೇರನ ಮುಖ್ಯ ನಗರವಾದ ಅಲಕಾಪುರಿಯನ್ನು ಕಬಳಿಸಲು ಪ್ರಾರಂಭಿಸಿದನು.

ಎಲ್ಲವನ್ನು ತಿಂದು ಮುಗಿಸಿದ ಗಣೇಶ ಕುಬೇರನನ್ನು ತಿನ್ನುವುದಾಗಿ ಹೇಳಿ ಕುಬೇರನನ್ನು ಅಟ್ಟಿಸಿಕೊಂಡು ಬಂದನು. ಹೆದರಿದ ಕುಬೇರ ಈಶ್ವರನಲ್ಲಿಗೆ ಬಂದು ಪಾದವನ್ನು ಹಿಡಿದು ಗಣೇಶನ ಹಸಿವು ನಿಯಂತ್ರಿಸುವಂತೆ ನನಗೆ ಸಹಾಯ ಮಾಡು ಎಂದು ಕಳಕಳಿಯಿಂದ ಪ್ರಾರ್ಥಿಸಿಕೊಂಡನು. ಪರಿಹಾರ ಬಹಳ ಸರಳ ಎಂದ ಶಿವ ಕೈತುಂಬಾ ದ್ವಿದಳಧಾನ್ಯವನ್ನು ಪುತ್ರ ಗಣೇಶನಿಗೆ ನೀಡಿದನು. ತಂದೆ ನೀಡಿದ ಧಾನ್ಯವನ್ನು ತಿಂದ ಗಣೇಶನಿಗೆ ಆಶ್ಚರ್ಯಕರವೆಂಬಂತೆ ಕೂಡಲೇ ಹಸಿವು ನೀಗಿತು.

ಈ ಕಥೆಯಿಂದ ತಿಳಿದುಬರುವುದೇನೆಂದರೆ, ಪ್ರೀತಿಯಿಂದ ಕೊಟ್ಟರೆ ಅಲ್ಪ ಅಹಾರವೂ ತೃಪ್ತಿ ನೀಡಬಲ್ಲದು. ಆದರೆ ಕುಬೇರನು ಶ್ರೀಮಂತಿಕೆಯ ಮದದಲ್ಲಿದ್ದದ್ದನ್ನು ಅಡಗಿಸಲು ಗಣೇಶ ಕುಬೇರನಿಗೆ ಈ ರೀತಿ ಪಾಠ ಕಲಿಸಿದ.

-ಮೈನಾಶ್ರೀ.ಸಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!