ಆರೋಗ್ಯ-ಜೀವನಶೈಲಿ

ಹಂದಿಜ್ವರ: ಸತ್ತವರ ಸಂಖ್ಯೆ 24ಕ್ಕೆ ಏರಿಕೆ

ರಾಜ್ಯದಲ್ಲಿ ಎಚ್1ಎನ್1 ಮಹಾಮಾರಿ ಸದ್ದಿಲ್ಲದೆ ಸಾವು ಬಯಸುತ್ತಿದೆ. ಕಳೆದ ಎರಡು ತಿಂಗಳಲ್ಲಿ ಈ ಮಹಾಮಾರಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 24ಕ್ಕೇರಿದೆ...

ಬೆಂಗಳೂರು: ರಾಜ್ಯದಲ್ಲಿ ಎಚ್1ಎನ್1 ಮಹಾಮಾರಿ ಸದ್ದಿಲ್ಲದೆ ಸಾವು ಬಯಸುತ್ತಿದೆ. ಕಳೆದ ಎರಡು ತಿಂಗಳಲ್ಲಿ ಈ ಮಹಾಮಾರಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 24ಕ್ಕೇರಿದೆ.

ಎಚ್1ಎನ್1 ಸೋಂಕು ಕಾಣಿಸಿಕೊಂಡ ನಂತರ ಆರೋಗ್ಯ ಇಲಾಖೆ ಇದುವರೆಗೆ ಒಟ್ಟು 1195 ಶಂಕಿತ ಪ್ರಕರಣಗಳನ್ನು ತಪಾಸಣೆಗೆ ಒಳಪಡಿಸಿದೆ. ಈ ಪೈಕಿ 349 ಜನರಿಗೆ ಎಚ್1ಎನ್1 ಸೋಂಕು ತಗಲಿರುವುದು ಖಚಿತವಾಗಿದೆ. ಸುಮಾರು 19 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕು ಹರಡದಂತೆ ತಡೆಗಟ್ಟಲು ಆರೋಗ್ಯ ಇಲಾಕೆ ಈಗಾಗಲೇ ರಾಜ್ಯಾದ್ಯಂತ ವಿವಿಧ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಆದರೂ, ರೋಗ ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಹೊರ ರಾಜ್ಯಗಳ ಹಾಗೆ, ಕರ್ನಾಟಕದಲ್ಲಿ ರೋಗ ವೇಗದಲ್ಲಿ ಹರಡುತ್ತಿಲ್ಲ. ಹೀಗಾಗಿ ಯಾರೂ ಭಯ ಪಡಬೇಕಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೂ ಸಾವಿನ ಸಂಖ್ಯೆ ಏರುತ್ತಿರುವುದು ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

'S-400 ಸುದರ್ಶನ' ಕ್ಷಿಪಣಿಯ ಪರಾಕ್ರಮವನ್ನು ಜಗತ್ತಿಗೆ ತೋರಿಸಿದ IAF! ಈಗ Video ರಿಲೀಸ್ ಮಾಡಿದ್ದು ಯಾಕೆ?

ನಟಿ ಜೊತೆ ವಿಜಯ್ ಅನೈತಿಕ ಸಂಬಂಧ?: 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ; TN BJP ಅಧ್ಯಕ್ಷ ಹೇಳಿದ್ದೆ ನಿಜವಾಯ್ತಾ?

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ ದಂಪತಿ!

SCROLL FOR NEXT