ಆರೋಗ್ಯ-ಜೀವನಶೈಲಿ

ಹಂದಿಜ್ವರ: ಸತ್ತವರ ಸಂಖ್ಯೆ 24ಕ್ಕೆ ಏರಿಕೆ

ರಾಜ್ಯದಲ್ಲಿ ಎಚ್1ಎನ್1 ಮಹಾಮಾರಿ ಸದ್ದಿಲ್ಲದೆ ಸಾವು ಬಯಸುತ್ತಿದೆ. ಕಳೆದ ಎರಡು ತಿಂಗಳಲ್ಲಿ ಈ ಮಹಾಮಾರಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 24ಕ್ಕೇರಿದೆ...

ಬೆಂಗಳೂರು: ರಾಜ್ಯದಲ್ಲಿ ಎಚ್1ಎನ್1 ಮಹಾಮಾರಿ ಸದ್ದಿಲ್ಲದೆ ಸಾವು ಬಯಸುತ್ತಿದೆ. ಕಳೆದ ಎರಡು ತಿಂಗಳಲ್ಲಿ ಈ ಮಹಾಮಾರಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 24ಕ್ಕೇರಿದೆ.

ಎಚ್1ಎನ್1 ಸೋಂಕು ಕಾಣಿಸಿಕೊಂಡ ನಂತರ ಆರೋಗ್ಯ ಇಲಾಖೆ ಇದುವರೆಗೆ ಒಟ್ಟು 1195 ಶಂಕಿತ ಪ್ರಕರಣಗಳನ್ನು ತಪಾಸಣೆಗೆ ಒಳಪಡಿಸಿದೆ. ಈ ಪೈಕಿ 349 ಜನರಿಗೆ ಎಚ್1ಎನ್1 ಸೋಂಕು ತಗಲಿರುವುದು ಖಚಿತವಾಗಿದೆ. ಸುಮಾರು 19 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕು ಹರಡದಂತೆ ತಡೆಗಟ್ಟಲು ಆರೋಗ್ಯ ಇಲಾಕೆ ಈಗಾಗಲೇ ರಾಜ್ಯಾದ್ಯಂತ ವಿವಿಧ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಆದರೂ, ರೋಗ ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಹೊರ ರಾಜ್ಯಗಳ ಹಾಗೆ, ಕರ್ನಾಟಕದಲ್ಲಿ ರೋಗ ವೇಗದಲ್ಲಿ ಹರಡುತ್ತಿಲ್ಲ. ಹೀಗಾಗಿ ಯಾರೂ ಭಯ ಪಡಬೇಕಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೂ ಸಾವಿನ ಸಂಖ್ಯೆ ಏರುತ್ತಿರುವುದು ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT