ಹೃದ್ರೋಗ(ಚಿತ್ರ ಕೃಪೆ: ಇಂಡಿಯನ್ ಎಕ್ಸ್ ಪ್ರೆಸ್ ) 
ಆರೋಗ್ಯ-ಜೀವನಶೈಲಿ

ಅಧಿಕ ರಕ್ತದೊತ್ತಡದಿಂದ ಭಾರತದಲ್ಲಿ ಹೆಚ್ಚುತ್ತಿವೆ ಹೃದಯ ಸಂಬಂಧಿ ಕಾಯಿಲೆ !

ಅಧಿಕ ರಕ್ತದೊತ್ತಡ, ಡಯಾಬಿಟೀಸ್, ತಂಬಾಕು ಸೇವನೆ ಹಾಗೂ ಅಧಿಕ ಕೊಲೆಸ್ಟರಾಲ್ ಸೇವನೆ ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚಾಗಲು ಕಾರಣ

ವಾಷಿಂಗ್ಟನ್: ಅಧಿಕ ರಕ್ತದೊತ್ತಡ, ಡಯಾಬಿಟೀಸ್, ತಂಬಾಕು ಸೇವನೆ ಹಾಗೂ ಅಧಿಕ ಕೊಲೆಸ್ಟರಾಲ್ ಸೇವನೆ ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚಾಗಲು ಕಾರಣ ಎಂಬುದು  ಅಮೆರಿಕಾದ ಹೃದ್ರೋಗ ಕಾಲೇಜಿನ ಸಮೀಕ್ಷೆ ಮೂಲಕ ತಿಳಿದುಬಂದಿದೆ.

ಹೃದ್ರೋಗ ಸಮಸ್ಯೆ ಹಾಗೂ ಅದನ್ನು ನಿಯಂತ್ರಿಸುವ ಬಗ್ಗೆ ಜಾಗತಿಕ ಮಟ್ಟದಲ್ಲಿ ಸಂಶೋಧನೆ ನಡೆಸುತ್ತಿರುವ ಅಮೇರಿಕಾ ಸಂಶೋಧಕರು ಭಾರತದಲ್ಲಿ ಹೆಚ್ಚುತ್ತಿರುವ ಹೃದಯ ಸಂಬಂಧಿತ ಕಾಯಿಲೆಗೆ ಕಾರಣವನ್ನು ಪತ್ತೆಹಚ್ಚಿದ್ದಾರೆ.  ಆದರೆ ಹೃದ್ರೋಗಿಯ ಬಗ್ಗೆ ಕಾಳಜಿ ವಹಿಸುವ ವಿಚಾರದಲ್ಲಿ  ಅತಿ ಕಡಿಮೆ ಮಾಹಿತಿ ದೊರೆತಿದೆ ಎಂದು ತಿಳಿಸಿದ್ದಾರೆ.  ವಿಶ್ವದ ಎರಡನೇ ಪ್ರಸಿದ್ಧ ರಾಷ್ಟ್ರ ಭಾರತ ದಿನದಿಂದ ದಿನಕ್ಕೆ ಹೆಚ್ಚು ಹೃದ್ರೋಗ ಸಮಸ್ಯೆಗಳನ್ನು ಎದುರಿಸುತ್ತಿದೆ, ತಂಬಾಕು ಸೇವನೆ ಹಾಗೂ ದೈಹಿಕ ಚಟುವಟಿಕೆಗಳಲ್ಲಿ ಹಾಗೂ ಆಹಾರ ಸೇವನೆಯಲ್ಲಿ ಶಿಸ್ತು ಇಲ್ಲದೇ ಇರುವುದು ಇದಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕಾದ ಹೃದ್ರೋಗ ಕಾಲೇಜು ನಡೆಸಿರುವ ಸಮೀಕ್ಷೆಯಲ್ಲಿ 68 ವಯೋಮಾನದ ಮೇಲ್ಪಟ್ಟ ಸುಮಾರು 196 ಜನರಿಂದ ಪ್ರರಿಕ್ರಿಯೆ ಪಡೆಯಲಾಗಿದೆ. ಹೃದಯ ಕಾಯಿಲೆಗಳು ಬಾಧಿಸುವುದಕ್ಕೆ  ಅಧಿಕ ರಕ್ತದೊತ್ತಡವೇ ಪ್ರಮುಖ ಕಾರಣ ಎಂದು ಶೇ.30 ಮಂದಿ ಅಭಿಪ್ರಾಯಪಟ್ಟಿದ್ದಾರೆ.

ಹೃದಯ ಸಂಬಂಧಿ ರೋಗಿಗಳ ಕಾಳಜಿಯ ಗುಣಮಟ್ಟ ಸುಧಾರಣೆ ಮಾಡಲು
ಸಮೀಕ್ಷೆ ನಡೆಸಿರುವ ಸಂಸ್ಥೆ  ಭಾರತದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ವರದಿಯನ್ನು ಅಮೆರಿಕಾದ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT