ಪಿಂಕ್ ರಿಬ್ಬನ್ 
ಆರೋಗ್ಯ-ಜೀವನಶೈಲಿ

ಹೃದ್ರೋಗ ಬಿಟ್ಟರೆ ಭಾರತೀಯರು ಹೆಚ್ಚು ಬಲಿಯಾಗುವ ರೋಗ ಕ್ಯಾನ್ಸರ್‌!

ಭಾರತದಲ್ಲಿ ಅತಿ ಹೆಚ್ಚು ಮಂದಿಯನ್ನು ಬಲಿ ಪಡೆಯುತ್ತಿರುವ ರೋಗಗಳಲ್ಲಿ ಕ್ಯಾನ್ಸರ್ ಗೆ ಎರಡನೇ ಸ್ಥಾನ!

ನವದೆಹಲಿ: ಭಾರತದಲ್ಲಿ ಅತಿ ಹೆಚ್ಚು ಮಂದಿಯನ್ನು ಬಲಿ ಪಡೆಯುತ್ತಿರುವ ರೋಗಗಳಲ್ಲಿ ಕ್ಯಾನ್ಸರ್ ಗೆ ಎರಡನೇ ಸ್ಥಾನ!. ಮೊದಲನೇ ಸ್ಥಾನ ಹೃದ್ರೋಗ, ನಂತರದ ಸ್ಥಾನದಲ್ಲಿ ಕ್ಯಾನ್ಸರ್‌ ಇದೆ ಎಂದು ಅಂತಾರಾಷ್ಟ್ರೀಯ ಅಧ್ಯಯನವೊಂದು ತಿಳಿಸಿದೆ. ಕ್ಯಾನ್ಸರ್ ನಲ್ಲಿ ಜಠರ, ಪಿತ್ತಜನಕಾಂಗ, ಅನ್ನನಾಳದ ಕ್ಯಾನ್ಸರ್‌ ಅತಿ ಹೆಚ್ಚು ಭಾರತೀಯರನ್ನು ಕೊಲ್ಲುತ್ತಿದೆ. ಕೇವಲ ಎರಡು ದಶಕಗಳ ಅಂತರದಲ್ಲಿ  ಸ್ತನ ಕ್ಯಾನ್ಸರ್‌ ಪ್ರಮಾಣವು ಭಾರತದಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಜಾಮಾ ಆಂಕಾಲಜಿ ಎಂಬ ವೈದ್ಯ ಜರ್ನಲ್‌ನಲ್ಲಿ ಪ್ರಕಟವಾಗಿರುವ ಕ್ಯಾನ್ಸರ್‌ ವರದಿಯೊಂದು ಉಲ್ಲೇಖಿಸಿದೆ.

1990ರ ದಶಕದಲ್ಲಿ 6.24 ಲಕ್ಷ ಕ್ಯಾನ್ಸರ್‌ ಪ್ರಕರಣಗಳು ಪತ್ತೆಯಾಗಿ 4.26 ಲಕ್ಷ ಮಂದಿ ಸಾವನ್ನಪ್ಪಿದ್ದರು. 2013ರ ಹೊತ್ತಿಗೆ ಈ ಸಂಖ್ಯೆಯಲ್ಲಿ ಬಾರೀ ಏರಿಕೆ ಕಂಡುಬಂದಿದ್ದು 11.7 ಲಕ್ಷ ಮಂದಿಯಲ್ಲಿ ಕ್ಯಾನ್ಸರ್‌ ಕಾಣಿಸಿಕೊಂಡಿದೆ. ಕ್ಯಾನ್ಸರ್ ಗೆ 6.75 ಲಕ್ಷ ಮಂದಿ ಪ್ರಾಣ ತೆರುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಯಾನ್ಸರ್ ಪೀಡಿತರಿಗೆ 3 ಹಾಗೂ 4ನೇ ಹಂತದ ಹೊತ್ತಿಗೆ ಕ್ಯಾನ್ಸರ್‌ ಇದೆ ಎಂಬುದು ರೋಗಿಗೆ ಗೊತ್ತಾಗುತ್ತಿದೆ. ಇದರಿಂದಾಗಿ ರೋಗಿ ಚಿಕಿತ್ಸೆ ಪಡೆಯುವುದು ವಿಳಂಬವಾಗುತ್ತಿದ್ದು, ಇದರಿಂದ ಸಾಯುವ ಸಂಭವ ಹೆಚ್ಚುತ್ತದೆ ಎಂದು ಅಧ್ಯಯನದ ಸಹ ಲೇಖಕರಾಗಿರೂ ಆಗಿರುವ ಭಾರತದ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನ ಮತ್ತು ಅಮೆರಿಕದ ಸಿಯಾಟ್ಲನ ವಾಷಿಂಗ್ಟನ್‌ ವಿವಿಯ ಪ್ರಾಧ್ಯಾಪಕ ಡಾ. ಲಲಿತ್‌ ದಂಡೋನಾ ತಿಳಿಸಿದ್ದಾರೆ.

ಅದೇ ವೇಳೆ ಭಾರತದಲ್ಲಿ ಬಾಯಿ ಕ್ಯಾನ್ಸರ್‌ ರೋಗಿಗಳ ಪ್ರಮಾಣ ಹೆಚ್ಚಿದೆ. 1990ರಲ್ಲಿ ಕೇವಲ 34 ಸಾವಿರ ಮಂದಿಯಷ್ಟಿದ್ದ  ರೋಗಿಗಳ ಸಂಖ್ಯೆ ಈಗ 84,700ಕ್ಕೆ ಏರಿಕೆ ಕಂಡಿದೆ. ಇದೇ ಅವಧಿಯಲ್ಲಿ ಸ್ತನ ಕ್ಯಾನ್ಸರ್‌ ಪ್ರಮಾಣ 56,786 ಪ್ರಕರಣಗಳಿಂದ 1,51,304 ಪ್ರಕರಣಗಳಿಗೆ ಹೆಚ್ಚಾಗಿದೆ.

188 ದೇಶಗಳಲ್ಲಿ 28 ಕ್ಯಾನ್ಸರ್‌ ಸಂಘಟನೆಗಳು ನಡೆಸಿರುವ ವಿಶ್ಲೇಷಣೆ ಆಧರಿಸಿ ಸಿದ್ಧಪಡಿಸಿರುವ ಈ ವರದಿ ಪ್ರಕಾರ, ವಿಶ್ವಾದ್ಯಂತ 2013ನೇ ಸಾಲಿನಲ್ಲಿ 1.5 ಕೋಟಿ ಕ್ಯಾನ್ಸರ್‌ ರೋಗಿಗಳಿದ್ದಾರೆ. 82 ಲಕ್ಷ ಮಂದಿ ಮಾರಕ ಕ್ಯಾನ್ಸರ್ ನಿಂದಾಗಿ ಸಾವನ್ನಪ್ಪುತ್ತಿದ್ದಾರೆ ಎಂದು ವರದಿಯಲ್ಲಿ  ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT