ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

82 ವರ್ಷದ ಕೇರಳ ವ್ಯಕ್ತಿ ಯಕೃತ್ತು ನೀಡಿದ ಅತಿ ಹಿರಿಯ ದಾನಿ

ಯಕೃತ್ತು ದಾನ ಮಾಡಿರುವ 82 ವರ್ಷದ ಕೇರಳ ವ್ಯಕ್ತಿ ದಕ್ಷಿಣ ಭಾರತದಲ್ಲೇ ಅತಿ ಹಿರಿಯ ದಾನಿ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ತಿರುವನಂತಪುರಂ: ಯಕೃತ್ತು ದಾನ ಮಾಡಿರುವ 82 ವರ್ಷದ ಕೇರಳ ವ್ಯಕ್ತಿ ದಕ್ಷಿಣ ಭಾರತದಲ್ಲೇ ಅತಿ ಹಿರಿಯ ದಾನಿ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ. 
ಕಳೆದ ತಿಂಗಳು ಅಪಘಾತದಿಂದ ಅಸ್ವಸ್ಥಗೊಂಡಿದ್ದ ದಾನಿ ವಿಕ್ರಮನ್ ಅವರ ಮಿದುಳು ಮೃತಪಟ್ಟಿದೆ ಎಂದು ವೈದ್ಯರು ಘೋಷಿಸಿದ್ದರು. ಈ ಯಕೃತ್ತು ಮರುಜೋಡಣೆ ಕೇರಳ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ನಡೆದಿದೆ. 
ಈ ಯಕೃತ್ತು ಪಡೆದಿರುವ ವ್ಯಕ್ತಿ ಕೊಲ್ಲಮ್ ಮೂಲದ 44 ವರ್ಷದ ವ್ಯಕ್ತಿ ಈಗ ಗುಣಮುಖರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. 
ವಿಕ್ರಮನ್ ಅವರಿಗೆ ಬೇರೆ ಯಾವುದೇ ರೋಗಗಳು ಇಲ್ಲದೆ ಇನ್ನುಳಿದಂತೆ ಆರೋಗ್ಯವಾಗಿದ್ದರು ಎಂದು ಕಿಮ್ಸ್ ಸಿಎಂಡಿ ಎಂ ಐ ಸಹದುಲ್ಲ ತಿಳಿಸಿದ್ದಾರೆ. 
"ಅವರ ಕುಟುಂಬದ ಈ ಪ್ರಶಂಸಾತ್ಮಕ ನಡೆ, ಕಳೆದ ಹಲವು ವರ್ಷಗಳಿಂದ ಯಕೃತ್ತು ಸಂಬಂಧಿ ರೋಗದಿಂದ ತೀವ್ರವಾಗಿ ಅಸ್ವಸ್ಥರಾಗಿದ್ದ ವ್ಯಕ್ತಿ ಗುಣಮುಖರಾಗುವುದಕ್ಕೆ ಸಹಕರಿಸಲಿದೆ" ಎಂದು ಸಹದುಲ್ಲ ತಿಳಿಸಿದ್ದಾರೆ. 
ವಿಕ್ರಮನ್ ಕುಟುಂಬ ಯಕೃತ್ತು ದಾನ ನೀಡಲು ಒಪ್ಪಿಗೆ ನೀಡಿದ ತಕ್ಷಣ ಸರ್ಕಾರದ ಇಲಾಖೆ ಇದಕ್ಕೆ ಸಂಬಂಧಿಸಿದಂತೆ ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ 12 ಘಂಟೆಗಳ ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲು ಸಹಕರಿಸಿತು ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT