ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಫೇಸ್ ಬುಕ್ ನಲ್ಲಿ ಅಪಮಾನ: ವಯಸ್ಕರಲ್ಲಿ ಹೆಚ್ಚುತ್ತಿರುವ ಖಿನ್ನತೆ

ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ಬೆದರಿಕೆ, ಅನಗತ್ಯ ಸಂಪರ್ಕಗಳು, ಅಸಂಬದ್ಧ ಕಮೆಂಟ್, ಅವಹೇಳನ ಮಾಡುವುದು ಇತ್ಯಾದಿಗಳಿಂದ...

ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ಬೆದರಿಕೆ, ಅನಗತ್ಯ ಸಂಪರ್ಕಗಳು, ಅಸಂಬದ್ಧ ಕಮೆಂಟ್, ಅವಹೇಳನ ಮಾಡುವುದು ಇತ್ಯಾದಿಗಳಿಂದ ಅದನ್ನು ಕೇಳಿದವರಿಗೆ ಅಥವಾ ಅಂತಹ ಅನುಭವಗಳಾದರೆ ಅಂಥವರು ಖಿನ್ನತೆಗೆ ಒಳಗಾಗುವುದು ಜಾಸ್ತಿ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ನಡೆಸುವ ಸಂವಾದವನ್ನು ಜನರು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ, ಇದು ಜೀವನದ ಮೇಲೆ ಬೀರುವ ಪರಿಣಾಮ ಕಡಿಮೆ ಎಂದು ಜನರು ಭಾವಿಸುವುದೇ ಇಲ್ಲ, ಏಕೆಂದರೆ ವ್ಯಕ್ತಿಗತ ಅನುಭವಕ್ಕಿಂತ ವಾಸ್ತವ ಅನುಭವ ಇದಾಗಿರುತ್ತದೆ ಎಂದು ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದ ಸಮಂತಾ ರೊಸೆಂತಲ್ ಹೇಳುತ್ತಾರೆ.
2002ರಲ್ಲಿ ಫೇಸ್ ಬುಕ್ ಆರಂಭವಾಗುವುದಕ್ಕೂ ಮೊದಲು ಇಂಗ್ಲೆಂಡ್ ನ ಫ್ಯಾಮಿಲಿ ಸ್ಟಡಿ ಮಾಡಲಾಗಿತ್ತು. ಆಗ ವ್ಯಕ್ತಿ, ವ್ಯಕ್ತಿಗಳ ನಡುವಿನ ಸಂಬಂಧಕ್ಕೂ ನಂತರ ಫೇಸ್ ಬುಕ್ ಆರಂಭಗೊಂಡ ನಂತರ ಜನರ ಸಂವಹನದಿಂದ ಉಂಟಾದ ಅನುಭವಕ್ಕೂ ವ್ಯತ್ಯಾಸಗಳಿದ್ದವು. ಫೇಸ್ ಬುಕ್ ನಲ್ಲಿ ನೆಗೆಟಿವ್ ಕಮೆಂಟ್ ಬಂದರೆ ಜನರು ಬೇಗನೆ ಖಿನ್ನತೆಗೆ ಒಳಗಾಗುತ್ತಾರೆ ಎನ್ನುತ್ತಾರೆ ಬ್ರೌನ್ ವಿಶ್ವವಿದ್ಯಾಲಯದ ಉಪನ್ಯಾಸಕ ಸ್ಟೆಫನ್ ಬುಕ.
''ಇದೊಂತರಾ ಕೋಳಿ-ಮೊಟ್ಟೆ ಪ್ರಶ್ನೆಯಿದ್ದಂತೆ, ಕೋಳಿ ಮೊದಲಾ, ಮೊಟ್ಟೆ ಮೊದಲಾ ಎಂಬ ಪ್ರಶ್ನೆಯಂತೆ ಫೇಸ್ ಬುಕ್ ನಲ್ಲಿ ಪ್ರತಿಕೂಲ ಪರಿಣಾಮ ಮೊದಲಾ ಅಥವಾ ಖಿನ್ನತೆ ಮೊದಲಾ ಎಂಬ ಸಂದೇಹ ಏಳುತ್ತದೆ ಎನ್ನುತ್ತಾರೆ ಬುಕ.
ಅಧ್ಯಯನಕ್ಕೆ 264 ಮಂದಿಯನ್ನು ಒಳಪಡಿಸಲಾಗಿತ್ತು. ಅವರಲ್ಲಿ ಶೇಕಡಾ 82ರಷ್ಟು ಮಂದಿ ಫೇಸ್ ಬುಕ್ ಬಳಸಲು ಆರಂಭಿಸದಲ್ಲಿಂದ ಕನಿಷ್ಠ ಒಂದು ಋಣಾತ್ಮಕ ಅನುಭವವಾಗಿದೆಯೆನ್ನುತ್ತಾರೆ. ಶೇಕಡಾ 24 ರಷ್ಟು ಮಂದಿಗೆ ಸಾಧಾರಣದಿಂದ ಭಾರೀ ಪ್ರಮಾಣದಲ್ಲಿ ಖಿನ್ನತಯುಂಟಾಗಿದೆ. ಈ ಅಧ್ಯಯನ ವಯಸ್ಕರಲ್ಲಿ ಆರೋಗ್ಯ(ಅಡೋಲೆಸೆಂಟ್ ಹೆಲ್ತ್) ಎಂಬ ವರ್ತಮಾನ ಪತ್ರಿಕೆಯಲ್ಲಿ ಪ್ರಕಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT