ಸಂಗ್ರಹ ಚಿತ್ರ 
ಆರೋಗ್ಯ

ಭಜ್ಜಿ, ಬೊಂಡ ಕಟ್ಟಿಕೊಡಲು ನ್ಯೂಸ್ ಪೇಪರ್ ಬಳಕೆ ಬೇಡ: ಎಫ್ಎಸ್ಎಸ್ಎಐ

ನ್ಯೂಸ್ ಪೇಪರ್ ಗಳಲ್ಲಿರುವ ಶಾಹಿ ಆಹಾರ ಪದಾರ್ಥಗಳಿಗೆ ಅಂಟಿಕೊಂಡು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಜ್ಜಿ, ಬೊಂಡ, ವಡೆ...

ನವದೆಹಲಿ: ನ್ಯೂಸ್ ಪೇಪರ್ ಗಳಲ್ಲಿರುವ ಶಾಹಿ ಆಹಾರ ಪದಾರ್ಥಗಳಿಗೆ ಅಂಟಿಕೊಂಡು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಜ್ಜಿ, ಬೊಂಡ ವಡೆ ಸೇರಿದಂತೆ ಇತರ ಆಹಾರ ಪದಾರ್ಥಗಳನ್ನು ಕಟ್ಟಿಕೊಡಬಾರದು ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಕ್ರಮ ಕೈಗೊಳ್ಳಬೇಕು ಎಂದು ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ  ಸೂಚಿಸಿದೆ.

ಈ ಸಂಬಂಧ ಎಲ್ಲಾ ಆಹಾರ ಉದ್ಯಮಿಗಳು ವಿಶೇಷವಾಗಿ ಸಂಘಟಿತವಲ್ಲದ ಆಹಾರ ಮಾರಾಟಗರರು, ಗ್ರಾಹರಿಗೆ ನ್ಯೂಸ್ ಪೇಪರ್ ಗಳಲ್ಲಿ ಆಹಾರ ಪದಾರ್ಥ ಪ್ಯಾಕ್ ಮಾಡಿಕೊಡದಂತೆ  ಸುತ್ತೊಲೆ ನೀಡುವಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಫ್ ಎಸ್ ಎಸ್ಎ ಐ ಆಯುಕ್ತರು ಸೂಚಿಸಿದ್ದಾರೆ.

ನ್ಯೂಸ್ ಪೇಪರ್ ಗಳಲ್ಲಿ ಆಹಾರ ಪದಾರ್ಥಗಳನ್ನು ಕಟ್ಟಿಕೊಟ್ಟು ಅದನ್ನು ಬಳಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾರಾಟಗಾರರಿಗೆ ಜಾಗೃತಿ ಮೂಡಿಸಬೇಕು ಎಂದು ಎಫ್ ಎಸ್ ಎಸ್ ಎಐ ಪತ್ರದಲ್ಲಿ ತಿಳಿಸಿದೆ.

ನ್ಯೂಸ್ ಪೇಪರ್ ಗಳಲ್ಲಿ ಆಹಾರ ಕಟ್ಟಿಕೊಡುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.ಆದರೆ ಇದು ಸುರಕ್ಷತಾ ವಿಧಾನವಲ್ಲ. ನ್ಯೂಸ್ ಪೇಪರ್ ನಲ್ಲಿರುವ ಇಂಕ್ ರಸಾಯನಿಕ ವಸ್ತುವಾಗಿದ್ದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಈ ಸಂಬಂಧ ಆಹಾರ ಮಾರಾಟಗಾರರಿಗೆ ಜಾಗೃತಿ ಮೂಡಿಸಬೇಕು, ನ್ಯೂಸ್ ಪೇಪರ್ ನಲ್ಲಿ ಆಹಾರ ಪದಾರ್ಥ ಪ್ಯಾಕ್ ಮಾಡುವುದನ್ನು ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT