ರಕ್ತದೊತ್ತಡ ನಿವಾರಣೆ ಔಷಧಿಗಳು (ಸಂಗ್ರಹ ಚಿತ್ರ) 
ಆರೋಗ್ಯ

ಎಚ್ಚರ...ಅಧಿಕ ಬಿಪಿ ಮಾತ್ರೆಗಳಿಂದ ಖಿನ್ನತೆಗೆ ಒಳಗಾಗುವಿರಿ!

ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಹೆಚ್ಚೆಚ್ಚು ಬಿಪಿ ಮಾತ್ರೆಗಳನ್ನು ಸೇವಿಸುವುದರಿಂದ ಖಿನ್ನತೆಗೆ ಒಳಗಾಗಲಿದ್ದಾರೆ ಎಂದು ನೂತನ ವೈದ್ಯಕೀಯ ಸಂಶೋಧನೆಯೊಂದು ಹೇಳಿದೆ.

ಲಂಡನ್: ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಹೆಚ್ಚೆಚ್ಚು ಬಿಪಿ ಮಾತ್ರೆಗಳನ್ನು ಸೇವಿಸುವುದರಿಂದ ಖಿನ್ನತೆಗೆ ಒಳಗಾಗಲಿದ್ದಾರೆ ಎಂದು ನೂತನ ವೈದ್ಯಕೀಯ ಸಂಶೋಧನೆಯೊಂದು  ಹೇಳಿದೆ.

ಅಧಿಕ ರಕ್ತದೊತ್ತಡ ನಿವಾರಣೆಗೆ ನಾವು ಸೇವಿಸುವ ಸಾಮಾನ್ಯ ಬಿಪಿ ಮಾತ್ರೆಗಳು ನಮ್ಮನ್ನು ಖಿನ್ನತೆಗೆ ದೂಡುತ್ತವೆ ಎಂದು ನೂತನ ಸಂಶೋಧನೆಯೊಂದು ತಿಳಿಸಿದೆ. ಬಿಪಿ ನಿಯಂತ್ರಣಕ್ಕೆ  ಸಾಮಾನ್ಯವಾಗಿ ಸೇವಿಸುವ ನಾಲ್ಕು ಔಷಧಿಗಳು ಮನುಷ್ಯನ ನರಮಂಡಲದ ಮೇಲೆ ಪ್ರಭಾವ ಬೀರಿ ಆತನ ಚಿಂತಾನಶೀಲತೆಯನ್ನೇ ಕುಂದಿಸುತ್ತದೆ. ಆ ಮೂಲಕ ಆತನನ್ನು ಆಲೋಚನಾ  ಅಸ್ವಸ್ಥತೆ ಅಥವಾ ಖಿನ್ನತೆಗೆ ದೂಡುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ರಕ್ತದೊತ್ತಡ ನಿವಾರಣೆಗೆ ಸಾಮಾನ್ಯವಾಗಿ ಸೇವಿಸಲಾಗುವ 4 ಬಗೆಯ ಔಷಧಿಗಳು ಮತ್ತು ಅದರಿಂದಾಗುವ ಮನಸ್ಥಿತಿಯ ಬದಲಾವಣೆ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 5,25,046 ರೋಗಿಗಳ  ಮೇಲೆ ಈ ಸಮೀಕ್ಷೆ ನಡೆಸಲಾಗಿದ್ದು, ಬಿಪಿ ಔಷಧ ತೆಗೆದುಕೊಂಡು 90 ದಿನದಲ್ಲಿ 299 ಜನರು ಖಿನ್ನತೆಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರಂತೆ. ಸತತವಾಗಿ 2 ವರ್ಷ ರಕ್ತದೊತ್ತಡ ಔಷಧ  ಸೇವಿಸಿದವರಲ್ಲಿ ಖಿನ್ನತೆ ತುಂಬ ಹೆಚ್ಚಾಗಿರುವುದು ಕಂಡು ಬಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಬ್ರಿಟನ್ ನ ಗ್ಲಾಸ್ಕೋ ವಿಶ್ವವಿದ್ಯಾಲಯದ ಪ್ರೊಫೆಸರ್ ಭಾರತ ಮೂಲದ ಸಂತೋಷ್ ಪದ್ಮನಾಭನ್ ಅವರು ಈ ಸಂಶೋಧನೆ ನಡೆಸಿದ್ದು, ರಕ್ತದೊತ್ತಡ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುವ  ಸಾಮಾನ್ಯ ಔಷಧಗಳು ವ್ಯಕ್ತಿಯನ್ನು ಖಿನ್ನತೆಗೆ ದೂಡುತ್ತವೆ ಎಂದು ತಿಳಿಸಿದ್ದಾರೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ವ್ಯಕ್ತಿಯ ಮಾನಸಿಕ ಆರೋಗ್ಯದ ಮೇಲೆ ಈ ವಿಧದ ಔಷಧಿಗಳು  ಋಣಾತ್ಮಕ ಪ್ರಭಾವ ಬೀರುವ ಸಾಧ್ಯತೆಗಳಿವೆ ಎಂದು ಅವರು ಎಚ್ಚರಿಸಿದ್ದಾರೆ.

ವೈದ್ಯರು ಔಷಧ ಸೂಚಿಸುವಾಗ ರೋಗಿಯ ಮಾನಸಿಕ ಆರೋಗ್ಯವನ್ನೂ ಪರಿಗಣಿಸಿದ ಬಳಿಕವೇ ಅವರಿಗೆ ಮುಂದಿನ ಚಿಕಿತ್ಸೆ ನೀಡಬೇಕು ಎಂದು ಅವರು ವೈದ್ಯರಿದೆ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT