ಸಾಂದರ್ಭಿಕ ಚಿತ್ರ 
ಆರೋಗ್ಯ

ಚಳಿಗಾಲದಲ್ಲಿ ಹೃದಯಾಘಾತ ಸಂಭವಿಸುವ ಸಾಧ್ಯತೆ ಹೆಚ್ಚು ಏಕೆ?

ಹೃದಯಾಘಾತವಾಗುವ ಸಂದರ್ಭ ಚಳಿಗಾಲದಲ್ಲಿ ಅಧಿಕ ಮತ್ತು ಬೇಸಿಗೆ ಕಾಲದಲ್ಲಿ ಕಡಿಮೆಯಾಗಿರುತ್ತದೆ. ಯಾಕೆಂದರೆ ....

ಲಂಡನ್: ಹೃದಯಾಘಾತವಾಗುವ ಸಂದರ್ಭ ಚಳಿಗಾಲದಲ್ಲಿ ಅಧಿಕ ಮತ್ತು ಬೇಸಿಗೆ ಕಾಲದಲ್ಲಿ ಕಡಿಮೆಯಾಗಿರುತ್ತದೆ. ಯಾಕೆಂದರೆ ಜೀವ ಹಾನಿಯುಂಟುಮಾಡುವ ರೋಗಗಳ ಮೇಲೆ ವಾತಾವರಣದಲ್ಲಿರುವ ಉಷ್ಣಾಂಶ ಪ್ರಮುಖವಾಗಿ ಕಾರಣವಾಗುತ್ತದೆ ಎಂದು ವಿಶ್ಲೇಷಣೆ ಹೇಳುತ್ತದೆ.
ಹೃದಯಾಘಾತವಾಗುವ ಪ್ರಮಾಣ ಸರಾಸರಿ ಶೀತದ ಉಷ್ಣತೆ ಇರುವ ಸಮಯದಲ್ಲಿ ಹೆಚ್ಚಾಗಿರುತ್ತದೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.
ದಿನನಿತ್ಯದ ಉಷ್ಣತೆ ಶೂನ್ಯ ಡಿಗ್ರಿಗಿಂತ ಕಡಿಮೆ ಮಟ್ಟಕ್ಕೆ ಕುಸಿದರೆ ದಿನಕ್ಕೆ ಸರಾಸರಿ ಹೃದಯಾಘಾತಕ್ಕೀಡಾಗುವವರ ಸಂಖ್ಯೆ ನಾಲ್ಕು ಆಗಿರುತ್ತದೆ. ಅಲ್ಲದೆ, ಹೆಚ್ಚಿನ ಗಾಳಿ ಬೀಸುತ್ತಿದ್ದರೆ ಹಗಲು ಹೊತ್ತಿನಲ್ಲಿ ಸೂರ್ಯನ ಬೆಳಕು ಕಡಿಮೆಯಿದ್ದರೆ
ಹೃದಯಾಘಾತಕ್ಕೀಡಾಗುವವರ ಸಂಖ್ಯೆ ಜಾಸ್ತಿಯಾಗಿರುತ್ತದೆ. ಋತುಮಾನಕ್ಕೆ ತಕ್ಕಂತೆ ಹೃದಯಾಘಾತಕ್ಕೀಡಾಗುವವರ ಪ್ರಮಾಣ ಬದಲಾಗುತ್ತಿರುತ್ತದೆ ಎಂದು ಸ್ವೀಡನ್ ನ ಲೂಂಡ್ ವಿಶ್ವವಿದ್ಯಾಲಯದ ಪ್ರಮುಖ ಲೇಖಕ ಮೊಮನ್ ಎ.ಮೊಹಮ್ಮದ್ ತಿಳಿಸುತ್ತಾರೆ.
ಹೊರಗೆ ಶೀತದ ವಾತಾವರಣವಿದ್ದಾಗ ಮಾನವನ ದೇಹದ ರಕ್ತ ನಾಳಗಳು ಕುಗ್ಗುತ್ತವೆ. ಚರ್ಮಕ್ಕೆ ಉಷ್ಣ ವಾಹನವನ್ನು ಕಡಿಮೆ ಮಾಡುತ್ತದೆ. ತರುವಾಯ ಅಪಧಮನಿಯ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಇತರ ಪ್ರತಿಕ್ರಿಯೆಗಳು ಹೃದಯ ಬಡಿತವನ್ನು ನಡುಗಿಸುತ್ತದೆ ಮತ್ತು ಹೆಚ್ಚಿಸುತ್ತದೆ, ಇದು ಚಯಾಪಚಯ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ದೇಹ ತಾಪಮಾನವನ್ನು ಹೆಚ್ಚಿಸುತ್ತದೆ ಎನ್ನುತ್ತಾರೆ ಸಂಶೋಧಕರು.
ಇದನ್ನು ಬಾರ್ಸಿಲೊನಾದ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯೊಲಜಿ ಕಾಂಗ್ರೆಸ್ ನಲ್ಲಿ ಪ್ರಸ್ತುತಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ