ಸಾಂದರ್ಭಿಕ ಚಿತ್ರ 
ಆರೋಗ್ಯ

ಥೈರಾಯ್ಡ್ ನಿಂದ ಕೂದಲು ಮತ್ತು ಚರ್ಮದ ಮೇಲೆ ಆಗುವ ಪರಿಣಾಮಗಳೇನು?

ನಮ್ಮ ಅನಿಯಮಿತ ಜೀವನ ಶೈಲಿಯಿಂದಾಗಿ ಎಲ್ಲರಲ್ಲೂ ಸಾಮಾನ್ಯ.ವಾಗಿ ಥೈರಾಯ್ಡ್ ರೋಗ ಕಾಣಿಸಿಕೊಳ್ಳುತ್ತದೆ. ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದ ಗ್ರಂಥಿಯಿರುತ್ತದೆ. ..

ನಮ್ಮ ಅನಿಯಮಿತ ಜೀವನ ಶೈಲಿಯಿಂದಾಗಿ ಎಲ್ಲರಲ್ಲೂ ಸಾಮಾನ್ಯ.ವಾಗಿ ಥೈರಾಯ್ಡ್ ರೋಗ ಕಾಣಿಸಿಕೊಳ್ಳುತ್ತದೆ.  ಕುತ್ತಿಗೆಯ ಭಾಗದಲ್ಲಿ ಚಿಟ್ಟೆ ಆಕಾರದ ಗ್ರಂಥಿಯಿರುತ್ತದೆ. ಈ ಗ್ರಂಥಿಯಿಂದಾಗಿ ಹಾರ್ಮೋನ್ ಗಳ ವ್ಯತ್ಯಾಸ ಹಾಗೂ ಕೆಲವು ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳಿರುತ್ತವೆ.
ದೇಹದಲ್ಲಿರುವ ಪ್ರತಿಯೊಂದು ಗ್ರಂಥಿ ಹಾಗೂ ಅಂಗಾಂಗಗಳು ನಮ್ಮ ಆರೋಗ್ಯದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದು. ಅದರಲ್ಲೂ ಥೈರಾಯ್ಡ್ ಗ್ರಂಥಿಗಳು ಹಾರ್ಮೊನನ್ನು ಬಿಡುಗಡೆ ಮಾಡುವುದರಿಂದ ಚಯಾಪಚಾಯ, ದೇಹದ ಉಷ್ಣತೆ ಮತ್ತು ನಾಡಿಬಡಿತ ಕ್ರಿಯೆಯು ನಿಯಂತ್ರಣದಲ್ಲಿರುತ್ತದೆ. ಈ ಮೂರರಲ್ಲಿ ಯಾವುದೇ ರೀತಿಯ ಏರುಪೇರು ಆದರೂ ಅದರಿಂದ ಯಕೃತ್, ಕರುಳು, ಕಿಡ್ನಿ ಮತ್ತು ಸಂತಾನೋತ್ಪತ್ತಿಯ ವ್ಯವಸ್ಥೆಯ ಮೇಲೆ ಪರಿಣಾಮ ಉಂಟಾಗುವುದು.
ಅದರಲ್ಲು ಮುಖ್ಯವಾಗಿ ಚರ್ಮ ಮತ್ತು ಕೂದಲಿನ ಮೇಲೆ ಥೈರಾಯ್ಡ್ ಹೆಚ್ಚು ಪರಿಣಾಮ ಬೀರುತ್ತದೆ., ಥೈರಾಯ್ಡ್ ಇರುವವರಿಗೆ ಅಂಗೈ ಬೆವರುತ್ತದೆ ಹಾಗೂ ಯಾವುದೇ ಗಾಯವಾದರೇ ಅದನ್ನು ಬೇಗ ಒಣಗಲು ಬಿಡುವುದಿಲ್ಲ,
ಒಣ ಹಾಗೂ ತುರಿಕೆ ಉಂಟು ಮಾಡುವ ಚರ್ಮವು ಥೈರಾಯ್ಡ್ ಗ್ರಂಥಿಯ ಸಮಸ್ಯೆಯ ಪ್ರಮುಖ ಲಕ್ಷಣವಾಗಿದೆ. ಉಗುರು ಉದ್ದಗಿನ ಗೆರೆಯಂತೆ ಒಡೆದುಹೋಗಿದ್ದರೆ ಇದರ ಬಗ್ಗೆ ನೀವು ಚಿಂತಿಸಬೇಕು. ಇದು ಥೈರಾಯ್ಡ್ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಥೈರಾಯ್ಡ್ ಇದ್ದರೆ ಮುಖ ವಯಸ್ಸಾದಂತೆ ಕಾಣುತ್ತದೆ.
ಕೂದಲು ಉದುರುವ ಸಮಸ್ಯೆ ಥೈರಾಯ್ಡ್ ರೋಗ, ಸ್ವರಕ್ಷಿತ ರೋಗ ದೇಹದ ಬೆಳವಣಿಗೆಗೆ ಅಗತ್ಯವಾದ ತ್ರಿಯಡೋಥೈರಾಯಿನ್ ಮತ್ತು ಥೈರಾಕ್ಸಿನ್ ಎಂಬ ಹಾರ್ಮೋನುಗಳು ಥೈರಾಯಿಡ್ ನಲ್ಲಿರುತ್ತವೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದಲ್ಲಿ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ.
ಇನ್ನೂ ಥೈರಾಯ್ಡ್ ರೋಗ ಇರುವವರಗ ಕತ್ತಿನ ಹಿಂಬಾಗದ ಚರ್ಮ ಬಣ್ಣದಲ್ಲಿ ಬದಲಾವಣೆಯಾಗುತ್ತದೆ. ಪಿಗ್ಮೆಂಟೇಶನ್ ಉಂಟಾಗುತ್ತದೆ. 
ಈಗ ಥೈರಾಯ್ಡ್ ಸರ್ವೇ ಸಾಮಾನ್ಯ ಕಾಯಿಲೆ ಎಂಬಂತಾಗಿದೆ, ಹೀಗಾಗಿ ಆರೋಗ್ಯಯುತ ಜೀವನಶೈಲಿಯಿಂದಾಗಿ ಥೈರಾಯ್ಡ್ ತಡೆಗಟ್ಟಬಹುದಾಗಿದೆ, ಧೂಮಪಾನ, ಸರಿಯಾದ ಪಥ್ಯ ಪಾಲನೆ ಮಾಡದಿರುವುದು ಥೈರಾಯ್ಡ್ ಗೆ ಕಾರಣವಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT